Wednesday, March 18, 2026
Google search engine
Homeಮುಖಪುಟನನ್ನ ಭಾಷಣಕ್ಕೆ ಹೆದರಿ ಅನರ್ಹಗೊಳಿಸಲಾಗಿದೆ -ರಾಹುಲ್ ಗಾಂಧಿ

ನನ್ನ ಭಾಷಣಕ್ಕೆ ಹೆದರಿ ಅನರ್ಹಗೊಳಿಸಲಾಗಿದೆ -ರಾಹುಲ್ ಗಾಂಧಿ

ಅದಾನಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣಕ್ಕೆ ಹೆದರಿದ್ದರಿಂದ ಲೋಕಸಭೆ ಸದಸ್ಯತ್ವದಿಂದ ನನ್ನನ್ನು ಅನರ್ಹಗೊಳಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಲೋಕಸಭೆಯಿಂದ ಅನರ್ಹಗೊಂಡ ನಂತರ ತಮ್ಮ ಮೊದಲ ಪತ್ರಿಕಾಗೋಷ್ಟಿಯಲ್ಲಿ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರ ವ್ಯಾಪಾರ ಸಾಮ್ರಾಜ್ಯವನ್ನು ಒಳಗೊಂಡಿರುವ ವಿಷಯದ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತಲೇ ಇರುವುದಾಗಿ ಮತ್ತು ಅನರ್ಹತೆ ಇಲ್ಲವೇ ಜೈಲು ಶಿಕ್ಷೆಗೆ ಹೆದರುವುದಿಲ್ಲ ಎಂದು ಗಾಂಧಿ ತಿಳಿಸಿದರು.

ಮಾಧ್ಯಮಗೋಷ್ಟಿಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್ ಗಡೆದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಜೈರಾಮ್ ರಮೇಶ್ ಮತ್ತು ಕೆ.ಸಿ.ವೇಣುಗೋಪಾಲ್ ಇದ್ದರು.

ಅದಾನಿ ಶೆಲ್ ಸಂಸ್ಥೆಗಳಲ್ಲಿ 20 ಸಾವಿರ ಕೋಟಿ ಹೂಡಿಕೆ ಮಾಡಿದವರು ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ ಮತ್ತು ಅವರು ಆ ಪ್ರಶ್ನೆಯನ್ನು ಕೇಳುತ್ತಾರೆ ಎಂದು ಹೇಳಿದರು.

ಅವರು ನನ್ನನ್ನು ಶಾಶ್ವತವಾಗಿ ಅನರ್ಹಗೊಳಿಸಿದರೂ ನಾನು ನನ್ನ ಕೆಲಸವನ್ನು ಮಾಡುತ್ತೇನೆ, ತನಗೆ ಬೆಂಬಲ ನೀಡಿದ ಎಲ್ಲಾ ವಿರೋಧ ಪಕ್ಷಗಳಿಗೆ ಧನ್ಯವಾದ ಅರ್ಪಿಸಿದ ರಾಹುಲ್ ಮುಂದೆ ಹೋಗುವಾಗ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.

ದೇಶದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿಗಳು ನಡೆಯುತ್ತಿದ್ದು, ಕಾಲಕಾಲಕ್ಕೆ ಅದರ ಉದಾಹರಣೆಗಳು ಪ್ರಕಟವಾಗುತ್ತಲೇ ಇರುತ್ತವೆ ಎಂದು ತಿಳಿಸಿದರು.
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular