ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಿಯಾಂಕ ಗಾಂಧಿ ರಾಷ್ಟ್ರೀಯ ಏಕತೆಗಾಗಿ ಸಾವಿರಾರು ಕಿಲೋಮೀಟ್ ನಡೆದ ರಾಹುಲ್ ಗಾಂಧಿ ದೇಶವನ್ನು ಎಂದಿಗೂ ಅವಮಾನಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
2019ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ಮತ್ತು ಲೋಕಸಭೆಯಿಂದ ಅವರನ್ನು ಅನರ್ಹಗೊಳಿಸಿರುವುದನ್ನು ವಿರೋಧಿಸಿ ಪ್ರಿಯಾಂಕ ಗಾಂಧಿ ಅವರು ಮಹಾತ್ಮಗಾಂದಿ ಅವರ ಸ್ಮಾರಕ ರಾಜ್ ಘಾಟ್ ನಲ್ಲಿ ಸಂಕಲ್ಪ ಸತ್ಯಾಗ್ರಹವನ್ನು ಉದ್ದೇಶಿಸಿ ಮಾತನಾಡಿದರು.
ರಾಹುಲ್ ಗಾಂಧಿಯನ್ನು ಚುನಾವಣೆಗೆ ಸ್ಪರ್ಧಿಸದಂತೆ ತಡೆಯುವುದು ದೇಶಕ್ಕೆ ಮತ್ತು ಅದರ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ. ಇದು ದುರಹಂಕಾರದ ಸರ್ಕಾರ. ಇದರ ವಿರುದ್ಧ ಧ್ವನಿ ಎತ್ತುವ ಸಮಯ ಬಂದಿದೆ ಎಂದು ಹೇಳಿದರು.
ಕೈಗಾರಿಕೋದ್ಯಮಿ ಗೌತಮ್ ಅದಾನಿ ಕುರಿತು ಪ್ರಧಾನಿಯನ್ನು ಪ್ರಶ್ನಿಸಿದ್ದಕ್ಕಾಗಿ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಲಾಗಿದೆ. ಈ ಕ್ರಮದ ಹಿಂದೆ ಇರುವವರೆಗೆ ಜನರು ತಕ್ಕ ಉತ್ತರ ನೀಡುತ್ತಾರೆ ಎಂದರು.
ನನ್ನ ಕುಟುಂಬದ ರಕ್ತ ಈ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳುಮೆ ಮಾಡಿದೆ. ಈ ದೇಶದ ಪ್ರಜಾಪ್ರಭುತ್ವಕ್ಕಾಗಿ ನಾವು ಏನು ಬೇಕಾದರೂ ಮಾಡಲು ಸಿದ್ದರಿದ್ದೇವೆ. ಕಾಂಗ್ರೆಸ್ ಮಹಾನ್ ನಾಯಕರು ಈ ದೇಶದಲ್ಲಿ ಪ್ರಜಾಪ್ರಭುತ್ವದ ಅಡಿಪಾಯ ಹಾಕಿದರು. ಈಗ ಸಮಯ ಬಂದಿದ್ದು ನಾವು ಇನ್ನು ಮುಂದೆ ಮೌನವಾಗಿರುವವರಲ್ಲ ಎಂದು ತಿಳಿಸಿದರು.


