ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್ ಶ್ರೀನಿವಾಸ್ ಅವರು ಮಾರ್ಚ್ 27ರ ಸೋಮವಾರದಂದು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ.
ದಿನ್ಯೂಸ್ ಕಿಟ್.ಇನ್ ಜೊತೆ ಜಂಗಮವಾಣಿಯಲ್ಲಿ ಮಾತನಾಡಿದ ಶ್ರೀನಿವಾಸ್ ಸೋಮವಾರ ಬೆಂಗಳೂರಿಗೆ ತೆರಳಿ ಸ್ವೀಕರ್ ಗೆ ರಾಜಿನಾಮ ಪತ್ರವನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.
ಕಾಂಗ್ರೆಸ್ ನಿಂದ ಟಿಕೆಟ್ ಸಿಗುವುದು ಗ್ಯಾರೆಂಟಿಯಾಗಿದೆ. ನಾನು ಗುಬ್ಬಿ ಕ್ಷೇತ್ರದಿಂದಲೇ ಕಾಂಗ್ರೆಸ್ ನಿಂದ ಸ್ಪರ್ಧಿಸುತ್ತೇನೆ ಎಂದು ತಿಳಿಸಿದರು.


