ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ ರವಿ ಅವರಿಗೆ ಸೋಲಿನ ಭೀತಿ ಎದುರಾಗಿದೆ. ಹೀಗಾಗಿ ಅವರು ಮತಿಭ್ರಮಣೆಯಾಗಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಶಿವಕುಮಾರ್, ಸಿ.ಟಿ.ರವಿ ಅವರನ್ನು ನಿಮ್ಹಾನ್ಸ್ ಅಥವಾ ಬೇರೆ ಮಾನಸಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕಿದೆ’ ಎಂದು ಕಿಡಿ ಕಾರಿದ್ದಾರೆ.
ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಟಿ ರವಿ ಅವರು ಶಿವಕುಮಾರ್ ಮತ್ತು ಅವರ ಸಹೋದರ ಡಿ ಕೆ ಸುರೇಶ್ ಅವರ ಕುರಿತು ನೀಡಿರುವ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಉತ್ತರಿಸಿದರು.
ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಹಾಗೂ ಬಿಜೆಪಿ ನಾಯಕರು ಕೂಡಲೇ ರವಿ ಅವರನ್ನು ಆಸ್ಪತ್ರೆಗೆ ಸೇರಿಸಲಿ ಎಂದು ಸಲಹೆ ನೀಡಿದರು.
ಸಿ.ಟಿ.ರವಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ಹೂಡುವ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ಈ ಹಿಂದೆ ಬಿಜೆಪಿಯ ಮತ್ತೊಬ್ಬ ಮೆಂಟಲ್ ಗಿರಾಕಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೆ. ಅದರ ವಿಚಾರಣೆ ನಡೆಯುತ್ತಿದೆ ಎಂದರು.
ಬೇರೆ ಪ್ರಕರಣಗಳಲ್ಲಿ ಆತುರವಾಗಿ ಶಿಕ್ಷೆ ಪ್ರಕಟವಾಗುತ್ತದೆ. ಹೀಗಾಗಿ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.


