Wednesday, March 18, 2026
Google search engine
Homeಜಿಲ್ಲೆಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ ಎಸ್.ಆರ್.ಶ್ರೀನಿವಾಸ್ - ಮಾರ್ಚ್ 31ಕ್ಕೆ ಕಾಂಗ್ರೆಸ್ ಸೇರ್ಪಡೆ

ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ ಎಸ್.ಆರ್.ಶ್ರೀನಿವಾಸ್ – ಮಾರ್ಚ್ 31ಕ್ಕೆ ಕಾಂಗ್ರೆಸ್ ಸೇರ್ಪಡೆ

ತುಮಕೂರು ಜಿಲ್ಲೆ ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಮಾರ್ಚ್ 27ರಂದು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದರು.

ಈ ಬಗ್ಗೆ ವಿಧಾನಸಭಾಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ಸ್ವಇಚ್ಚೆಯಿಂದ ರಾಜಿನಾಮೆ ನೀಡುತ್ತಿದ್ದೇನೆ ಎಂದು ಉಲ್ಲೇಖಿಸಿದ್ದಾರೆ.

ಕೆಲವು ದಿನಗಳಿಂದ ಜೆಡಿಎಸ್ ಪಕ್ಷದ ಕುರಿತು ಅಸಮಾಧಾನಗೊಂಡಿದ್ದ ಶ್ರೀನಿವಾಸ್ ಪಕ್ಷ ತ್ಯಜಿಸುತ್ತಾರೆ ಎಂಬ ವದಂತಿಗಳು ಹರಿದಾಡಿದ್ದವು. ಅದಕ್ಕೆ ಪುಷ್ಠಿ ಕೊಡುವಂತೆ ಇಂದು ರಾಜಿನಾಮೆ ನೀಡಿದ್ದಾರೆ.

ಮಾರ್ಚ್ 31ಕ್ಕೆ ಕಾಂಗ್ರೆಸ್ ಸೇರ್ಪಡೆ:

ಇಂದು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಎಸ್.ಆರ್.ಶ್ರೀನಿವಾಸ್ ಮಾರ್ಚ್ 31ಕ್ಕೆ ಕಾಂಗ್ರೆಸ್ ಸೇರ್ಪಡೆಗೊಳ್ಳುವುದಾಗಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ನನ್ನ ನಡುವೆ ಆದ ಮನಸ್ತಾಪವೇ ಪಕ್ಷ ಬಿಡಲು ಕಾರಣ ಎಂದು ಸ್ಪಷ್ಟಪಡಿಸಿದ್ದಾರೆ.

ನಾನು ನೋವಿನಿಂದ ಜೆಡಿಎಸ್ ಗೆ ರಾಜಿನಾಮೆ ಸಲ್ಲಿಕೆ ಮಾಡಿದ್ದೇನೆ. ತುಮಕೂರಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಸೋಲಿಸಿಲ್ಲ. ನಾನು ಪಕ್ಷ ಬಿಡಲ್ಲ ಅಂದರೂ ಅಭ್ಯರ್ಥಿ ಘೋಷಿಸಿದರು. ಇದು ನನಗೆ ನೋವು ತರಿಸಿತು. ಈ ಹಿನ್ನೆಲೆಯಲ್ಲಿ ನಾನು ಪಕ್ಷ ಬಿಡುವ ನಿರ್ಧಾರಕ್ಕೆ ಬಂದು ತಿಳಿಸಿದ್ದಾರೆ.

ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಇಂದು ರಾಜಿನಾಮೆ ಸಲ್ಲಿಸಿದ್ದೇನೆ. ನಮ್ಮ ತಾಲೂಕಿನ ಎಲ್ಲ ಮುಖಂಡರ ಜೊತೆ ಮಾತನಾಡಿಯೇ ಕಾಂಗ್ರೆಸ್ ಸೇರುವ ನಿರ್ಧಾರ ಮಾಡಿದ್ದೇನೆ ಎಂದು ಸ್ಪಷ್ಡಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular