ಚುನಾವಣಾ ಪ್ರಚಾರದ ವೇಳೆ ನಗದು ಹಂಚಿದ್ದಾರೆ ಎಂಬ ದೂರಿನ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಪೊಲೀಸರು ನಾನ್ ಕಾಗ್ನಿಸೆಬಲ್ ಪ್ರಕರಣವನ್ನು ದಾಖಲಿಸಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸುವ ಮುನ್ನ ಮಂಗಳವಾರ ಮಂಡ್ಯ ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಕೆಪಿಸಿಸಿ ಅಧ್ಯಕ್ಷರು ಹಣವನ್ನು ಎಸೆದಿದ್ದಾಋಎ ಎಂದು ದೂರುದಾರರು ಆರೋಪಿಸಿದ್ದಾರೆ.
ನಾವು ಇನ್ನೂ ಎಫ್ಐಆರ್ ದಾಖಲಿಸಿಲ್ಲ. ನಾನ್ ಕಾಗ್ನಿಸಬಲ್ ಪ್ರಕರಣವನ್ನು ತೆಗೆದುಕೊಳ್ಳಲಾಗಿದೆ ಮತ್ತು ನಿರ್ದೇಶನವನ್ನು ಕೋರಿ ನ್ಯಾಯಾಲಯದ ಮುಂದೆ ಈ ವಿಷಯವನ್ನು ಪ್ರಸ್ತುತಪಡಿಸಲಾಗುವುದು ಎಂದು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಇದೇ ವೇಳೆ ಮಂಡ್ಯದ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಪ್ರಚಾರದ ವೇಳೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟ ಕಲಾವಿದರಿಗೆ ಶಿವಕುಮಾರ್ ಹಣ ಮಾತ್ರ ನೀಡಿದ್ದಾರೆ ಎಂದು ಹೇಳಿದ್ದಾರೆ.
ಮೇ 10ರ ಚುನಾವಣೆಗೂ ಮುನ್ನ ಮತದಾರರಿಗೆ ಆಮಿಷವೊಡ್ಡಿ ಹಣ ಹಂಚಿದ್ದಾರೆ ಎಂಬ ಆರೋಪವನ್ನು ಡಿ.ಕೆ.ಶಿವಕುಮಾರ್ ತಳ್ಳಿಹಾಕಿದ್ದಾರೆ.


