ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾಔಣೆಗೆ ಪ್ರಧಾನಿ ನರೇಂದ್ರ ಮೋದಿ , ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಸ್ಟಾರ್ ಪ್ರಚಾರವನ್ನು ಮುನ್ನಡೆಸಲಿದ್ದಾರೆ.
ರಾಜ್ಯ ಘಟಕದ ಒಗ್ಗಟ್ಟಿನ ವಿಶ್ವಾಸದ ಕೊರತೆ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ಮತ್ತು ಅಧಿಕಾರದ ಸಮೀಕರಣಗಳ ಕಾರಣದಿಂದ ನಾಯಕತ್ವವು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವುದರಿಂದ ದೂರವಿರಬಹುದು ಎಂದು ಪಕ್ಷದ ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ಆದರೆ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪಕ್ಷ ಬಹುಮತ ಗಳಿಸಿದರೆ ಅವರು ಉನ್ನತ ಹುದ್ದೆಯಲ್ಲಿ ಮುಂದುವರಿಯುತ್ತಾರೆ ಎಂದು ಹೇಳಲಾಗುತ್ತಿದೆ.
ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪ್ರಬಲ ಪೈಪೋಟಿ ನೀಡುತ್ತಿದ್ದು, ಹಿಂದಿನ ಯಡಿಯೂರಪ್ಪ ಅವರಂತೆ ಬಸವರಾಜ ಬೊಮ್ಮಾಯಿ ಅವರು ಲಿಂಗಾಯತ ಸಮುದಾಯದ ವಿಶ್ವಾಸ ಗಳಿಸಲು ಸಾಧ್ಯವಾಗಿಲ್ಲ ಎಂದು ಬಿಜೆಪಿ ನಾಯಕತ್ವ ಒಪ್ಪಿಕೊಂಡಿದೆ. ಯಡಿಯೂರಪ್ಪ ಅವರು ಲಿಂಗಾಯತ ಸಮುದಾಯದ ಪ್ರಶ್ನಾತೀತ ನಾಯಕರಾಗಿ ಮುಂದುವರಿಯುತ್ತಿರುವುದರಿಂದ ಸಮುದಾಯದಲ್ಲಿ ತನ್ನ ಬೆಂಬಲದ ನೆಲೆಯನ್ನು ಉಳಿಸಿಕೊಳ್ಳಲು ಬಿಜೆಪಿ ಅವರನ್ನು ಮುಂಚೂಣಿಯಲ್ಲಿ ಇರಿಸಲು ಒತ್ತಾಯಿಸಲ್ಪಟ್ಟಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ತಿಳಿಸಿದೆ.
ಮತ್ತೊಂದೆಡೆ ಬೊಮ್ಮಾಯಿ ಅವರು ಶಿವಮೊಗ್ಗ ವಿಮಾನ ನಿಲ್ದಾಣ, ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಸೇರಿದಂತೆ ಹಲವಾರು ದೊಡ್ಡ ಮೂಲಸೌಕರ್ಯ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಬಿಜೆಪಿಯ ಮೂಲಗಳ ಪ್ರಕಾರ, 2 ಬಿ ಹಿಂದುಳಿದ ವರ್ಗಗಳ ಅಡಿಯಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾದ ನಾಲ್ಕು ಶೇಕಡಾ ಮೀಸಲಾತಿಯನ್ನು ರದ್ದುಪಡಿಸುವ ಮತ್ತು ಆರ್ಥಿಕವಾಗಿ ದುರ್ಬಲ ವರ್ಗದ ಕೋಟಾ ಪೂಲ್ ಗೆ ಅವರನ್ನು ವರ್ಗಾಯಿಸುವ ಬೊಮ್ಮಾಯಿ ಸರ್ಕಾರದ ನಿರ್ಧಾರವು ಸಹಾಯ ಮಾಡಬಹುದು. ಹೀಗಾಗಿ ಬಿಜೆಪಿ ಹಿಂದೂ ಮತಗಳನ್ನು ಕ್ರೂಢೀಕರಿಸುವ ಕೆಲಸ ಮಾಡುತ್ತಿದೆ ಎನ್ನಲಾಗಿದೆ.
ಆದಾಗ್ಯೂ ಒಕ್ಕಲಿಗರು, ಪರಿಶಿಷ್ಟ ಜಾತಿ, ಪಂಗಡಗಳ ಮತಗಳನ್ನು ಪಡೆಯಲು ಬಿಜೆಪಿ ಹೆಣಗಾಡುತ್ತಿರುವಾಗ ಚುನಾವಣಾ ಪೂರ್ವದಲ್ಲಿ ಮುಖ್ಯಮಂತ್ರಿ ಮುಖವನ್ನು ಘೋಷಿಸುವುದು ಒಳ್ಳೆಯ ಆಲೋಚನೆಯಲ್ಲ ಎಂದು ಮೂಲಗಳು ಒಪ್ಪಿಕೊಂಡಿವೆ.
ಮೇ 10ರಂದು ನಡೆಯುವ ಚುನಾವಣೆಯಲ್ಲಿ ಪಕ್ಷವು ಗೆದ್ದರೆ ಲಿಂಗಾಯತರ ಬೆಂಬಲವನ್ನು ಕಡೆಗಣಿಸುವ ಸ್ಥಿತಿಯಲ್ಲಿ ಅದು ಇರುವುದಿಲ್ಲ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಬಿಜೆಪಿಗೆ ಮುಖ್ಯಮಂತ್ರಿಯಾಗಲು ಬೊಮ್ಮಾಯಿ ಹೊರತುಪಡಿಸಿ ಬೇರೆ ಯಾವುದೇ ಪ್ರಮುಖ ಲಿಂಗಾಯತ ಮುಖವಿಲ್ಲ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.


