Wednesday, March 18, 2026
Google search engine
Homeಮುಖಪುಟಎಸ್.ಆರ್.ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ

ಎಸ್.ಆರ್.ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ

ಮೂರು ದಿನಗಳ ಹಿಂದೆ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ ಅಲಿಯಾಸ್ ವಾಸು ಇಂದು ಜೆಡಿಎಸ್ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಸೇರ್ಪಡೆಯಾದರು. ಕಾಂಗ್ರೆಸ್ ಮುಖಂಡರು ಎಸ್.ಆರ್. ಶ್ರಿನಿವಾಸ್ ಗೆ ಪಕ್ಷದ ಶಾಲು ಹೊದಿಸಿ ಬಾವುಟ ನೀಡಿ ಬರಮಾಡಿಕೊಂಡರು.

2004 ರಿಂದ ಶ್ರೀನಿವಾಸ್ ಅವರು ಸತತ 4ನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2004ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ವಿಜಯ ಸಾಧಿಸಿದ್ದ ಅವರು ನಂತರ ಜೆಡಿಎಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

ಬಳಿಕ ಮಾತನಾಡಿದ ಶ್ರೀನಿವಾಸ್, ನಾನು ಶಾಸಕನಾಗಿರುವಾಗಲೇ ಬೇರೆಯವರಿಗೆ ಟಿಕೆಟ್ ಘೋಷಿಸಲಾಯಿತು. ಇಂತಹ ಅವಮಾನಗಳಿಂದ ಬೇಸತ್ತು ಕಾಂಗ್ರೆಸ್ ಸೇರಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಮೂಡಿಗೆರೆಯ ಹಾಲಪ್ಪ, ಸತ್ಯಾನಂದ ಮತ್ತಿತರರು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗುರುವಾರ ಸೇರ್ಪಡೆಯಾದರು.

ವೇದಿಕೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಮಾಜಿ ಸಚಿವರಾದ ಟಿ ಬಿ ಜಯಚಂದ್ರ, ಮೋಟಮ್ಮ, ಮಾಜಿ ಶಾಸಕ ಕೆ ಎನ್ ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular