Wednesday, March 18, 2026
Google search engine
Homeಮುಖಪುಟಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ಸಹಿಸುವುದಲ್ಲ - ಮಾಜಿ ಸಿಎಂ ಕುಮಾರಸ್ವಾಮಿ

ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ಸಹಿಸುವುದಲ್ಲ – ಮಾಜಿ ಸಿಎಂ ಕುಮಾರಸ್ವಾಮಿ

ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ನೀಡುವ ಕೆಲಸ ಮಾಡಿದರೆ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ಯಶವಂತಪುರ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ನೀಡುವುದನ್ನು ಸಹಿಸುವುದಿಲ್ಲ. ಕಿರುಕುಳ ನೀಡುವ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕರ್ತರಿಗೆ ಧಮ್ಕಿ, ಕಿರುಕುಳ ಕೊಡುವುದು ಆಗುತ್ತಿದೆ. ಚುನಾವಣೆ ಬಂದಾಗಿನಿಂದ ಅದು ಜಾಸ್ತಿಯಾಗಿದೆ. ಬೇರೆ ಪಕ್ಷದಿಂದ ಬೇಸತ್ತು ನಮ್ಮ ಪಕ್ಷಕ್ಕೆ ಬರುವವರನ್ನು ಕೆಲ ಕಡೆ ಪೋಲಿಸರ ಮಧ್ಯಸ್ಥಿಕೆಯಲ್ಲಿ ಹೆದರಿಸಿ ಅವರನ್ನು ಪುನಾ ಅದೇ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.

ನಾನು ಪೋಲಿಸರಿಗೆ ಎಚ್ಚರಿಕೆ ಕೊಡುತ್ತೇನೆ. ಇನ್ನೊಂದು ತಿಂಗಳು ಅಷ್ಟೇ ನಿಮ್ಮ ಸಮಯ. ಅಧಿಕಾರಿಗಳು ಕಾನೂನಿನ ಅಡಿಯಲ್ಲಿ ಕೆಲಸ ಮಾಡಬೇಕು. ಶಾಸಕರಿಗೆ ಅಡಿಯಾಳಾಗಿ ಕೆಲಸ ಮಾಡಿದರೆ ಜೂನ್ ತಿಂಗಳ ಬಳಿಕ ಪ್ರಾಯಶ್ಚಿತ್ತ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಜನತೆಯ ಹಣದಿಂದ ನೀವು ಕೆಲಸ ಮಾಡ್ತಿದ್ದೀರಿ ಅನ್ನೋದನ್ನ ಅಧಿಕಾರಿಗಳು ನೆನಪಿನಲ್ಲಿಟ್ಟುಕೊಳ್ಳಬೇಕು. ನಾನೂ ಎರಡು ಬಾರಿ ಸಿಎಂ ಆಗಿ ಕೆಲಸ ಮಾಡಿದ್ದೇನೆ. ಎಂದೂ ಇಂಥ ದ್ವೇಷದ ರಾಜಕೀಯಕ್ಕೆ ನಾನು ಪ್ರೋತ್ಸಾಹ ಕೊಟ್ಟಿಲ್ಲ. ಅಧಿಕಾರಿಗಳು ತಮ್ಮ ನಡವಳಿಕೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular