ಕಾಂಗ್ರೆಸ್ ಪಕ್ಷಕ್ಕೆ ಅಂಬೇಡ್ಕರ್ ಅವರ ಕುರಿತಾಗಲೀ, ಅವರು ಬರೆದಿರುವ ಸಂವಿಧಾನದ ಮೇಲೆಯಾಗಲಿ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ವಕ್ತಾರರು ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮೀಸಲಾತಿ ಬಗ್ಗೆ ನಂಬಿಕೆ ಇಲ್ಲ ಎಂದರು.
ಮೀಸಲಾತಿ ನೀಡಿರುವುದು ಕಾನೂನುಬಾಹಿರ, ಸಂವಿಧಾನ ವಿರೋಧಿ ಎಂದು ಕೆಳಮಟ್ಟದ ಶಬ್ದಗಳನ್ನು ಬಳಸಿದ್ದಾರೆ. ಜನಸಂಖ್ಯೆ ಆಧಾರಿತವಾಗಿ ಮೀಸಲಾತಿ ನೀಡಬೇಕು ಎಂದು ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡ ಸಮುದಾಯಗಳ ಬಹು ವರ್ಷಗಳ ಬೇಡಿಕೆಯನ್ನು ಈಡೇರಿಸಿ, ಸಂವಿಧಾನದ ಪರಿಚ್ಛೇದ 9 ಗೆ ಸೇರಿಸಲು ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಅವರ ಕಾಲದಲ್ಲಿ ಏನೂ ಮಾಡದೇ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದದವರನ್ನು ಬರೀ ಮತ ಬ್ಯಾಂಕ್ ಗಾಗಿ ಬಳಕೆ ಮಾಡಲಾಗಿದೆ. ನಾಗಮೋಹನ್ ದಾಸ್ ವರದಿ ಬಂದು 4 ವರ್ಷ ಆಗಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಯಡಿಯೂರಪ್ಪ ನವರ ಅವಧಿಯಲ್ಲಿ ವರದಿ ಬಂದ ಆರು ತಿಂಗಳಿಗೆ ವಿಸ್ತರಣೆ ಮಾಡಿದ್ದಾರೆ.
ನನ್ನ ಅವಧಿಯಲ್ಲಿ ಸರ್ವ ಪಕ್ಷಗಳ ಸಭೆ ಕರೆದು ಒಪ್ಪಿಗೆ ಪಡೆಯಲಾಯಿತು. ನಂತರ ಸಚಿವ ಸಂಪುಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಪರ ನಿರ್ಣಯ ಕೈಗೊಳ್ಳಲಾಯಿತು. ಸರ್ಕಾರ ಆದೇಶ ಹೊರಡಿಸಿ ಶೆಡ್ಯೂಲ್ 9 ಕ್ಕೆ ಸೇರಿಸಲಾಗಿದೆ ಎಂದರು.


