Wednesday, March 18, 2026
Google search engine
Homeಮುಖಪುಟಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ - ಮಾರ್ಗಸೂಚಿ ಕೋರಿದ ಪ್ರತಿಪಕ್ಷಗಳ ಅರ್ಜಿ ಸ್ವೀಕರಿಸಲು ಸುಪ್ರೀಂ ನಕಾರ

ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ – ಮಾರ್ಗಸೂಚಿ ಕೋರಿದ ಪ್ರತಿಪಕ್ಷಗಳ ಅರ್ಜಿ ಸ್ವೀಕರಿಸಲು ಸುಪ್ರೀಂ ನಕಾರ

ಪ್ರತಿಪಕ್ಷಗಳ ನಾಯಕರ ವಿರುದ್ಧ ಕೇಂದ್ರ ತನಿಖಾ ಸಂಸ್ಥೆಗಳನ್ನು ಅನಿಯಂತ್ರಿತವಾಗಿ ಬಳಸಿಕೊಳ್ಳುತ್ತಿದೆ ಮತ್ತು ಭವಿಷ್ಯಕ್ಕಾಗಿ ಮಾರ್ಗಸೂಚಿಗಳನ್ನು ಕೋರಿ ಕಾಂಗ್ರೆಸ್ ನೇತೃತ್ವದ 14 ಪಕ್ಷಗಳು ಸಲ್ಲಿಸಿದ ಮನವಿಯನ್ನು ಪರಿಗಣಿಸಲು ಸುಪ್ರೀಂಕೋರ್ಟ್ ಬುಧವಾರ ನಿರಾಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಅವರನ್ನೊಳಗೊಂಡ ಪೀಠವು ಪ್ರಕರಣದ ಸತ್ಯಗಳಿಗೆ ಸಂಬಂಧಿಸದೆ ಸಾಮಾನ್ಯ ಮಾರ್ಗಸೂಚಿಗಳನ್ನು ಹಾಕುವುದು ಅಪಾಯಕಾರಿ ಎಂದು ಹೇಳಿದೆ.

ಮನವಿಯನ್ನು ಪುರಸ್ಕರಿಸುವಲ್ಲಿ ಸರ್ವೋಚ್ಛ ನ್ಯಾಯಾಲಯದ ನಿರಾಸಕ್ತಿಯನ್ನು ಮನಗಂಡ ರಾಜಕೀಯ ಪಕ್ಷಗಳ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮಾನು ಸಿಂಘ್ವಿ ಅರ್ಜಿಯನ್ನು ಹಿಂಪಡೆಯಲು ಅನುಮತಿ ಕೋರಿದರು.

ಈ ಹಂತದಲ್ಲಿ ಅರ್ಜಿಯನ್ನು ಹಿಂಪಡೆಯಲು ವಕೀಲರು ಅನುಮತಿ ಕೋರಿದ್ದಾರೆ. ಅದರಂತೆ ಅರ್ಜಿಯನ್ನು ಹಿಂಪಡೆಯಲಾಗಿದೆ ಎಂದು ವಜಾಗೊಳಿಸಲಾಗಿದೆ ಎಂದು ಪೀಠ ಆದೇಶಿಸಿದೆ.

ನೀವು ವೈಯಕ್ತಿಕ ಕ್ರಿಮಿನಲ್ ಪ್ರಕರಣ ಅಥವಾ ಪ್ರಕರಣಗಳ ಗುಂಪನ್ನು ಹೊಂದಿರುವಾಗ ದಯವಿಟ್ಟು ನಮ್ಮ ಬಳಿಗೆ ಬನ್ನಿ ಎಂದು ಪೀಠ ಹೇಳಿದೆ.

ವಿರೋಧ ಪಕ್ಷದ ರಾಜಕೀಯ ನಾಯಕರು ಮತ್ತು ಇತರ ನಾಗರಿಕರು ಭಿನ್ನಾಭಿಪ್ರಾಯಕ್ಕೆ ತಮ್ಮ ಮೂಲಭೂತ ಹಕ್ಕನ್ನು ಚಲಾಯಿಸುವ ವಿರುದ್ಧ ಬಲವಂತದ ಕ್ರಿಮಿನಲ್ ಪ್ರಕ್ರಿಯೆಗಳ ಬಳಕೆಯಲ್ಲಿ ಆತಂಕಕಾರಿ ಹೆಚ್ಚಳವ್ನು ಮನವಿಯಲ್ಲಿ ಆರೋಪಿಸಲಾಗಿದೆ.

ಕಾಂಗ್ರೆಸ್ ಹೊರತಾಘಿ ಡಿಎಂಕೆ, ಆರ್.ಜೆ.ಡಿ, ಬಿಆರ್.ಎಸ್. ತೃಣಮೂಲ ಕಾಂಗ್ರೆಸ್, ಎಎಪಿ, ಎನ್.ಸಿ.ಪಿ, ಶಿವಸೇನೆ, ಜೆಎಂಎಂ, ಜೆಡಿಯು, ಸಿಪಿಎಂ, ಸಿಪಿಐ, ಸಮಾಜವಾದಿ ಪಕ್ಷಗಳು ಜಂಟಿ ನಡೆಯ ಭಾಗವಾಗಿರುವ ಪಕ್ಷಗಳಾಗಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular