Wednesday, March 18, 2026
Google search engine
Homeಮುಖಪುಟಬಿಜೆಪಿ ಮುಖಂಡರರನ್ನು ಕಾಂಗ್ರೆಸ್ ಗೆ ಕರೆದುಕೊಂಡರೂ ಬಿಜೆಪಿ ಮತ ಬ್ಯಾಂಕ್ ಬಿಟ್ಟು ಹೋಗೋದಿಲ್ಲ

ಬಿಜೆಪಿ ಮುಖಂಡರರನ್ನು ಕಾಂಗ್ರೆಸ್ ಗೆ ಕರೆದುಕೊಂಡರೂ ಬಿಜೆಪಿ ಮತ ಬ್ಯಾಂಕ್ ಬಿಟ್ಟು ಹೋಗೋದಿಲ್ಲ

ಕಾಂಗ್ರೆಸ್ ಪಕ್ಷದವರು ಬಿಜೆಪಿಯವರನ್ನು ಕರೆದುಕೊಂಡಿರಬಹುದು. ಆದರೆ ಬಿಜೆಪಿಯ ಮತ ಬ್ಯಾಂಕ್ ಬಿಟ್ಟು ಹೋಗೋಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಹೋದ ಸಂದರ್ಭದಲ್ಲಿ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ ಎಂದರು.

ಶೆಟ್ಟರ್ ಅವರು ಮಾಡಿರುವ ಆರೋಪದ ಬಗ್ಗೆ ಮಾತನಾಡಿ ಯಾರಾದರೂ ಪಕ್ಷ ಬಿಟ್ಟು ಹೋದಾಗ ಏನಾದರೂ ಒಂದು ಕಾರಣ ಕೊಡಬೇಕು. ಕಳೆದ 25 ವರ್ಷದ ಅವರ ರಾಜಕೀಯ ಜೀವನದಲ್ಲಿ ಬಿಜೆಪಿ ಶೆಟ್ಟರ್ ಗೆ ಎಲ್ಲವನ್ನೂ ಕೊಟ್ಟಿದೆ. ಅವರನ್ನ ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಹೋಗಿದ್ದಾರೆ ಅದಕ್ಕೊಂದು ನೆಪ ಅಷ್ಟೇ ಎಂದು ಹೇಳಿದರು.

ಜಗದೀಶ್ ಶೆಟ್ಟರ್ ಅವರು ವಾಪಸ್ಸು ಬರುವ ಬಗ್ಗೆ ಮಾತನಾಡಿ, ಅವರು ಹಿಂದುರಿಗಿ ಬರುವ ನಿರೀಕ್ಷೆ ಮಾಡೋಲ್ಲ ಎಂದರು.

ವೀರೇಂದ್ರ ಪಾಟೀಲ್, ಬಂಗಾರಪ್ಪ, ದೇವರಾಜ ಅರಸರನ್ನ ಹೊರಹಾಕಿದನಂಥ ಪಕ್ಷಕ್ಕೆ ಶೆಟ್ಟರ್ ಹೋಗಿದ್ದಾರೆ. ಮೊದಲು ಸನ್ಮಾನ ಮಾಡಿ ಚುನಾವಣಾ ಬಳಿಕ ಅವಮಾನ ಮಾಡ್ತಾರೆ. ಜಗದೀಶ ಶೆಟ್ಟರ್ ಅವರನ್ನ ಬಳಸಿಕೊಂಡು ಹೊರಗೆ ಹಾಕುತ್ತಾರೆ. ಬಿಎಸ್ ವೈ ಇರೋತನಕ ಲಿಂಗಾಯತರು ನಮ್ಮ ಜೊತೆ ಇರುತ್ತಾರೆ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular