ನಾನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ. ನಾನೇ ಅನೇಕ ಮುಖ್ಯಮಂತ್ರಿಗಳನ್ನು ನೇಮಕ ಮಾಡುವವನಿದ್ದೇನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ನಾನು ರಾಜ್ಯದ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಚುನಾವಣೆಯ ಬಳಿಕ ಶಾಸಕರು ಯಾರನ್ನು ಆಯ್ಕೆ ಮಾಡುತ್ತಾರೆ ಎನ್ನುವುದರ ಮೇಲೆ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಯಾರಾಗುತ್ತಾರೆ ಎಂದು ತೀರ್ಮಾನ ಮಾಡುತ್ತದೆ. ಪಕ್ಷದ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಹೇಳಿದ್ದಾರೆ.
ನಾವು ಹಲವು ಅಭಿವೃದ್ಧಿ ಕಾರ್ಯಗಳನ್ನು ಈ ಮೊದಲು ಮಾಡಿದ್ದೇವೆ. ಹಾಗಾಗಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. ಈ ಸಾರಿ ನಮ್ಮ ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ.