ಕರ್ನಾಟಕದಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಗೆದ್ದು ಅಧಿಕಾರವನ್ನು ಉಳಿಸಿಕೊಳ್ಳಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅರ್ಧಕ್ಕಿಂತ 15-20 ಸ್ಥಾನಗಳನ್ನು ಗೆಲ್ಲಲಿದೆ ಎಂದು ತಿಳಿಸಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ನಂತರ ಪ್ರಮುಖ ಲಿಂಗಾಯತ ನಾಯಕರಾದ ಜಗದೀಶ್ ಶೆಟ್ಟರ್ ಮತ್ತು ಲಕ್ಷಣ ಸವದಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರ ಸರಣಿಯು ಪಕ್ಷವನ್ನು ತೊರೆದಿರುವ ಸಮಯದಲ್ಲಿ ಶಾ ಹೇಳಿಕೆಗಳು ಹೊರಬಿದ್ದಿವೆ.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲಿಂಗಾಯತ ಪ್ರಬಲ ವ್ಯಕ್ತಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷಕ್ಕಾಗಿ ಸತತ ಪರಿಶ್ರಮ ಮತ್ತು ಡಬಲ್ ಇಂಜಿನ್ ಸರ್ಕಾರ ಅವಶ್ಯವಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಯೋಜನೆಗಳು ಸಾಮಾನ್ಯ ಜನರನ್ನು ತಲುಪುವ ಏಕೈಕ ಮಾರ್ಗವಾಗಿದೆ ಎಂದು ಹೇಳಿದರು.
ಪೂರ್ಣ ಬಹುಮತದೊಂದಿಗೆ ಜಯ ಗಳಿಸುತ್ತೇವೆ. ದಕ್ಷಿಣ ರಾಜ್ಯದಲ್ಲಿ ಮುಂಬರುವ ಚುನಾವಣಾ ಕದನದ ಬಗ್ಗೆ ತಮ್ಮ ಭವಿಷ್ಯವಾಣಿಯ ಪ್ರಶ್ನೆಗೆ ಶಾ ಉತ್ತರಿಸಿದರು. ಹಂಗ್ ಅಸೆಂಬ್ಲಿಯ ವರದಿಗಳನ್ನು ಅವರು ತಳ್ಳಿ ಹಾಕಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ಪ್ರತಿಪಾದಿಸಿದ ಶಾ, ಚುನಾಔಣೆಗಳು ಮುಗಿದ ನಂತರ ಜೆಡಿಎಸ್ ತನ್ನ ಎಲ್ಲಾ ಶಾಸಕರ ಜೊತೆಗೆ ಕಾಂಗ್ರೆಸ್ ಜೊತೆ ಕುಳಿತು ಆಡಳಿತವನ್ನು ನಡೆಸಲಿದೆ ಎಂದು ಹೇಳಿದರು.