ವಿಧಾನಸಭಾ ಚುನಾವಣೆ ಸಮೀಪ ಇರುವಾಗಲೇ ತುಮಕೂರಿನ ಮಾಜಿ ಶಾಸಕ ಷಫಿ ಅಹಮದ್ ಅವರ ನಿವಾಸಕ್ಕೆ ಜಾತ್ಯತೀತ ಜನತಾ ದಳದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಭೇಟಿ ನೀಡಿರುವುದು ಕತೂಹಲ ಮೂಡಿಸಿದೆ. ಸಿ.ಎಂ.ಇಬ್ರಾಹಿಂ ಜೆಡಿಎಸ್ ಅಭ್ಯರ್ಥಿ ಗೋವಿಂದ ರಾಜು ಅವರಿಗೆ ಬೆಂಬಲ ನೀಡುವಂತೆ ಷಫಿ ಅವರಿಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಸೋಮವಾರ ಷಫಿ ಅಹಮದ್ ಅವರ ಮನೆಗೆ ಭೇಟಿ ನೀಡಿದ ಸಿ.ಎಂ.ಇಬ್ರಾಹಿಂ ಜೆಡಿಎಸ್ ಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಈ ಭೇಟಿ ಜೆಡಿಎಸ್ ಅಭ್ಯರ್ಥಿಗೆ ಬಲ ತಂದಂತೆ ಆಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಆಂಜಿನಪ್ಪ, ತುಮಕೂರು ನಗರ ಕ್ಷೇತ್ರದ ಅಭ್ಯರ್ಥಿ ಗೋವಿಂದರಾಜು, ಮುಖಂಡ ಪಾವಗಡ ಶ್ರೀರಾಮ್ ಸೇರಿದಂತೆ ಉಪಸ್ಥಿತರಿದ್ದರು.


