ಬಿಜಯಪುರ ಜಿಲ್ಲೆಯ ಮಸಬಿನಾಳ ಗ್ರಾಮದಲ್ಲಿ ಕಿಡಿಗೇಡಿಗಳು ಇವಿಎಂ ಧ್ವಂಸಗೊಳಿಸಿರುವ ಘಟನೆ ಜರುಗಿದೆ. ಮತದಾನಕ್ಕಾಗಿ ಕಾರಿನಲ್ಲಿ ತಂದ ಇವಿಎಂ ಮತ್ತು ಇತರೆ ಸಲಕರಣೆಗಳನ್ನ ಕಿಡಿಗೇಡಿಗಳು ಪುಡಿಪುಡಿ ಮಾಡಿದ್ದಾರೆ.
ಇವಿಎಂಗಳನ್ನು ನಾಶಪಡಿಸಲು ಕಾರಣಗಳೇನು ಎಂಬುದು ಇದುವರೆಗೆ ತಿಳಿದುಬಂದಿಲ್ಲ.
ಈ ಸಂಬಂಧ ಮಸಬಿನಾಳ ಗ್ರಾಮದ 25 ಮಂದಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವಿಜಯಪುರ ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿದ್ದು ಇವಿಎಂ ನಾಶಪಡಿಸಲು ಕಾರಣಗಳೇನು ಎಂಬ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.


