Wednesday, March 18, 2026
Google search engine
Homeಮುಖಪುಟಕಾಂಗ್ರೆಸ್ 141 ಸ್ಥಾನ ಗೆಲ್ಲುತ್ತೆ - ಡಿ.ಕೆ.ಶಿವಕುಮಾರ್

ಕಾಂಗ್ರೆಸ್ 141 ಸ್ಥಾನ ಗೆಲ್ಲುತ್ತೆ – ಡಿ.ಕೆ.ಶಿವಕುಮಾರ್

ಬೆಂಗಳೂರು : ನನಗೆ ಎಕ್ಸಿಟ್ ಪೋಲ್ ಬಗ್ಗೆ ನಂಬಿಕೆ ಇಲ್ಲ. ನನ್ನ ಪ್ರಕಾರ 141 ಸ್ಥಾನ ಗೆಲ್ಲುತ್ತೇವೆ. ನಮ್ಮ ಸಮೀಕ್ಷೆಯಲ್ಲಿ ಎಕ್ಸಿಟ್ ಪೋಲ್ ಸಮೀಕ್ಷೆಗಿಂತ ಹೆಚ್ಚು ಮಾದರಿಗಳಿಂದ ಸಂಗ್ರಹ ಮಾಡಲಾಗಿದೆ. ಕಾಂಗ್ರೆಸ್ ಪರವಾಗಿ ದೊಡ್ಡ ಅಲೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಕ್ಸಿಟ್ ಪೋಲ್ ಸಮಿಕ್ಷೆಗಿಂತ ಕಾಂಗ್ರೆಸ್ ಹೆಚ್ಚಿನ ಸ್ಥಾನ ಪಡೆಯಲಿದೆ ಹೊರತು ಕಡಿಮೆ ಆಗಲೂ ಸಾಧ್ಯವಿಲ್ಲ. ಎಕ್ಸಿಟ್ ಪೋಲ್ ನಲ್ಲಿ ನಮ್ಮ ಪರ ವಿಶ್ವಾಸ ತೋರಿದ್ದು ಅದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ನಿಚ್ಚಳ ಬಹುಮತ ಬರಲಿದೆ ಎಂಬುದು ನಮ್ಮ ನಂಬಿಕೆ ಎಂದರು.

ನಾನು ಸ್ಥಳೀಯವಾಗಿ ಓಡಾಟ ಮಾಡಿದ್ದೇನೆ. ಬಿಜೆಪಿ ಪ್ರತಿ ಕ್ಷೇತ್ರದಲ್ಲಿ ಎಷ್ಟೇ ದುಡ್ಡು ಸುರಿಸಿರಬಹುದು, ಎಷ್ಟೇ ದೊಡ್ಡ ನಾಯಕರು ಬಂದು ಪ್ರಚಾರ ಮಾಡಿರಬಹುದು. ಆವರೆ ಮತ ಎಂಬುದು ಬುಲೆಟ್ ಗಿಂತ ಶಕ್ತಿಶಾಲಿಯಾಗಿದೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ಹೇಗೆ ಜನ ಬ್ರಿಟೀಷರ ಗುಂಡಿಗೆ ಹೆದರಲಿಲ್ಲವೋ, ಅದೇ ರೀತಿ ಜನ ಡಬಲ್ ಇಂಜಿನ್ ಸರ್ಕಾರ, ದುರಾಡಳಿತ, ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ ಮಾಡಿಕೊಂಡಿದ್ದರು. ಜನ ತಮ್ಮ ನಿರ್ಧಾರ ಬದಲಿಸುವುದಿಲ್ಲ. ನಾಳೆ ಮಧ್ಯಾಹ್ನ 1 ಗಂಟೆ ವೇಳೆಗೆ ಫಲಿತಾಂಶ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರೆಸಾರ್ಟ್ ರಾಜಕೀಯ ಈ ಬಾರಿ ಅಂತ್ಯ ಆಗುತ್ತಾ ಎಂದು ಕೇಳಿದಾಗ, ‘ಬಿಜೆಪಿಯವರು ಎಷ್ಟೇ ಸೀಟು ಬಂದರು ನಾವು ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಅದು ಅವರ ಭ್ರಮೆ. ಎಲ್ಲಾ ಪಕ್ಷದವರು ತಮ್ಮ ಪಕ್ಷದ ನಾಯಕರನ್ನು ಒಂದು ಕಡೆ ಸೇರಿಸಿ ವಿಶ್ರಾಂತಿ ಪಡೆದು ಚರ್ಚೆ ಮಾಡುತ್ತಾರೆ. ಇದು ಸಹಜ ಎಂದು ತಿಳಿಸಿದರು.

ಎಕ್ಸಿಟ್ ಪೋಲ್ ಆಧಾರದ ಮೇಲೆ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆ ಮಾಡಲಾಗುತ್ತಿದೆಯೇ ಎಂದು ಕೇಳಿ, ಸದ್ಯಕ್ಕೆ ಯಾವ ಅಧಿಕಾರ ಹಂಚಿಕೆ ಆಗಿಲ್ಲ. ನಮ್ಮ ಹೈಕಮಾಂಡ್, ಮಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಏನು ಹೇಳುತ್ತಾರೋ ಅದೇ ಅಂತಿಮ ಎಂದು ಹೇಳಿದರು.

ನೀವು 20 ವರ್ಷಗಳಿಂದ ಕಾಯುತ್ತಿರುವ ಸಮಯ ಬಂದಿದೆಯೇ ಎಂದು ಕೇಳಿದಾಗ, ನಾನು ಶ್ರಮ ಪಟ್ಟಿದ್ದೇನೆ. ಉಪಚುನಾವಣೆಯಲ್ಲಿ ಪಕ್ಷ ಸೋತ ನಂತರ ದಿನೇಶ್ ಗುಂಡೂರಾವ್ ಅವರು ಅಧ್ಯಕ್ಷ ಸ್ಥಾನಕ್ಕೆ ಹಾಗೂ ಸಿದ್ದರಾಮಯ್ಯ ಅವರು ಕೂಡ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ ನಂತರ ಸೋನಿಯಾ ಗಾಂಧಿ ಅವರು ನನಗೆ ಈ ಜವಾಬ್ದಾರಿ ನೀಡಿದರು. ನಾನು ಈ ಜವಾಬ್ದಾರಿ ಪಡೆದ ದಿನದಿಂದ ಮಲಗಿಲ್ಲ. ಪಕ್ಷದ ನಾಯಕರು ಕಾರ್ಯಕರ್ತರಿಗೂ ಮಲಗಲು ಬಿಟ್ಟಿಲ್ಲ. ಪಕ್ಷ ಸಂಘಟನೆಗೆ ಏನು ಮಾಡಬೇಕೋ ಮಾಡಿದ್ದೇನೆ. ಎಲ್ಲರೂ ನಮಗೆ ಸಹಕಾರ ನೀಡಿ ಆಶೀರ್ವಾದ ನೀಡುತ್ತಾರೆ. ಉತ್ತಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular