ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರನ್ನಾಗಿ ಹಿರಿಯ ಪತ್ರಕರ್ತ ಕೆ.ವಿ.ಪ್ರಭಾಕರ್ ಅವರನ್ನು ನೇಮಕ ಮಾಡಿ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ಎ. ಸುನಂದಮ್ಮ ಅಧಿಸೂಚನೆ ಹೊರಡಿಸಿದ್ದಾರೆ.
ಮೇ 20 ರಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ಲಭ್ಯವಿರುವ ಎಲ್ಲಾ ಸೌಲಭ್ಯವನ್ನು ನೀಡಿ ಆದೇಶಿಸಲಾಗಿದೆ.
ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ ಹಿರಿಯ ವರದಿಗಾರರಾಗಿ ಕೆ.ವಿ.ಪ್ರಭಾಕರ್ ಕೆಲಸ ನಿರ್ವಹಿಸಿದ್ದಾರೆ. ಬೆಂಗಳೂರು ವರದಿಗಾರರ ಕೂಟದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ.
ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಯಾಗಿ ಡಾ.ವೆಂಕಟೇಶ್ ನೆಲ್ಲೂಕುಂಟೆ ಅವರನ್ನು ನೇಮಕ ಮಾಡಲಾಗಿದೆ. ಸಾಹಿತ್ಯ ಅಧ್ಯಯನಗಳ ಸೆಳೆತ ಇರುವ ಇವರು ಸಮಾಜದ ಕಟ್ಟಕಡೆಯ ವ್ಯಕ್ತಿಯ ಅಳಲನ್ನೂ ಕೇಳಿಸಿಕೊಳ್ಳುವ ಕಾರಣಕ್ಕೆ ವಿಶೇಶ ಎನಿಸುತ್ತಾರೆ.

ಇದುವರೆಗೆ ವಿಪಕ್ಷ ನಾಯಕರ ಆಪ್ತ ಕಾರ್ಯದರ್ಶಿಯಾಗಿದ್ದ ವೆಂಕಟೇಶ್ ಈಗ ಸಿಎಂ ಸಿದ್ದರಾಮಯ್ಯ ಅವರ ಆಪ್ತಕಾರ್ಯದರ್ಶಿ ಆಗಿ ಜವಾಬ್ದಾರಿ ಹೊತ್ತಿದ್ದಾರೆ.
ಬದ್ದತೆ, ಸಾಮಾಜಿಕ ಸಂವೇದನೆ ಇರುವ ವೆಂಕಟೇಶಯ್ಯ ಅವರನ್ನು ಆಪ್ತ ಕಾರ್ಯದರ್ಶಿಯಾಗಿ ನೇಮಕ ಮಾಡಿರುವುದಕ್ಕೆ ಸಿದ್ದರಾಮಯ್ಯ ಕೂಡಾ ಅಬಿನಂದನಾರ್ಹರು ಎಂದು ಸಾಮಾಜಿಕ ಹೋರಾಟಗಾರ ಹರ್ಷಕುಮಾರ್ ಕುಗ್ವೆ ಹೇಳಿದ್ದಾರೆ.


