Tuesday, March 17, 2026
Google search engine
Homeಮುಖಪುಟಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ

ಉಚಿತ, ಖಚಿತ ಎಂದು ಸುಳ್ಳು ಹೇಳಿಕೊಂಡು ಓಡಾಡಿ ಅಧಿಕಾರಕ್ಕೆ ಬಂದವರು, ಇವತ್ತು ಜನರನ್ನು ವಿದ್ಯುತ್ ದುರ್ಬಳಕೆ ಮಾಡಿಕೊಳ್ಳಲು ಪ್ರತಿಪಕ್ಷಗಳು ಪ್ರಚೋದಿಸುತ್ತಿವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿ ಜೆಪಿ ಭವನದಲ್ಲಿ ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡರ ಸಮಕ್ಷಮದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.

ವಿದ್ಯುತ್ ಬಳಕೆ ಬಗ್ಗೆ ವಿರೋಧ ಪಕ್ಷಗಳು ಜನರನ್ನು ದಿಕ್ಕು ತಪ್ಪಿಸುತ್ತಿವೆ ಎಂದು ಮುಖ್ಯಮಂತ್ರಿಗಳ ಹೇಳಿಕೆ ಗಮನಿಸಿದ್ದೇನೆ. ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ಜನರನ್ನು ಎತ್ತಿಕಟ್ಟುತ್ತಿವೆ ಅಂತ ಅವರು ಹೇಳಿದ್ದಾರೆ. ಅಂಥ ಹೇಳಿಕೆ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ ಎಂದು ಕಿಡಿಕಾರಿದರು.

ಇದಕ್ಕೆಲ್ಲಾ ವೇದಿಕೆ ಸಿದ್ದ ಮಾಡಿಕೊಟ್ಟಿದ್ದೇ ನೀವು. ರಾಜ್ಯದ ಜನಕ್ಕೆ ಗ್ಯಾರಂಟಿ ಬಗ್ಗೆ ಸಹಿ ಮಾಡಿ ಕೊಟ್ಟಿದ್ದೀರಿ. ಸುಳ್ಳು ಹೇಳಿ ಮತ ಪಡೆದಿರಿ. ಈಗ ನಿಮಗೆ ಅದರ ಸಾಧಕ ಭಾದಕ ಅರ್ಥ ಆಗ್ತಾ ಇದೆ. ಮೊದಲೇ ಈ ಬಗ್ಗೆ ಯೋಚನೆ ಮಾಡಿರಲಿಲ್ಲವಾ? ಪರಿಜ್ಞಾನ ಇರಲಿಲ್ಲವಾ? ಈಗ ಷರತ್ತು ಎನ್ನುತ್ತಿದ್ದಾರೆ. ಇವರಿಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ ಎಂದು ಪ್ರಶ್ನಿಸಿದರು.

ಈಗಿನ ಮುಖ್ಯಮಂತ್ರಿಗಳು ಸರ್ವವನ್ನೂ ಬಲ್ಲವರು. ಈಗಾಗಲೇ 13 ಬಜೆಟ್ ಗಳನ್ನು ಮಂಡಿಸಿದ್ದಾರೆ. ಇನ್ನೇನು 14ನೇ ಬಜೆಟ್ ಅನ್ನೂ ಮಂಡಿಸಲಿದ್ದಾರೆ. ರಾಜ್ಯದ ಹಣಕಾಸು ಬಗ್ಗೆ, ಆರ್ಥಿಕತೆ ಬಗ್ಗೆ ಅವರಿಂತ ಬಲ್ಲ ಜ್ಞಾನಿಗಳು ಯಾರಿದ್ದಾರೆ? ಮುಂದೇನು ಮಾಡಬೇಕು ಎನ್ನುವುದು ಅವರಿಗೆ ಗೊತ್ತಿರಬೇಕು. ಅದು ಬಿಟ್ಟು ಜನರನ್ನು ಪ್ರತಿಪಕ್ಷಗಳು ಎತ್ತಿಕಟ್ಟುವ ಕೆಲಸ ಮಾಡುತ್ತಿವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದರು.

ವಿದ್ಯುತ್ ದರ ಏರಿಕೆಗೆ ಸಂಬಂಧಿಸಿ ಬಿಜೆಪಿ ನಾಯಕರು ಇಡೀ ರಾಜ್ಯದಲ್ಲಿ ಸೋಮವಾರ ಧರಣಿ ಮಾಡಿದ್ದಾರೆ. ಇವರು ಯಾವ ಕಾರಣಕ್ಕಾಗಿ ಧರಣಿ ಪ್ರತಿಭಟನೆ ಮಾಡಿದ್ದಾರೆ ಎನ್ನುವುದೇ ಸೋಜಿಗ. ಬಿಜೆಪಿ ಸರಕಾರದ ಕಾಲದಲ್ಲಿಯೇ ವಿದ್ಯುತ್ ದರ ಹೆಚ್ಚಳಕ್ಕೆ ಅಷ್ಟು ಎಂದಿದ್ದು. ಇವತ್ತು ನೋಡಿದರೆ ಪ್ರತಿಭಟನೆ ಅಂತ ಕಣ್ಣೊರೆಸುವ ನಾಟಕ ನಾಟಕ ಆಡುತ್ತಿದ್ದಾರೆ. ಜನರು ಎರಡೂ ರಾಷ್ಟ್ರೀಯ ಪಕ್ಷಗಳ ಈ ನಡವಳಿಕೆ ಗಮನಿಸಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಮಾಜಿ ಸಂಸದ ಕುಪೇಂದ್ರ ರೆಡ್ಡಿ, ಪಕ್ಷದ ಹಿರಿಯ ನಾಯಕ, ಶಾಸಕ ವೆಂಕಟಶಿವಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಬಿಎಂ ಫಾರೂಖ್, ಟಿ.ಎ.ಶರವಣ, ಇಂಚರ ನಾರಾಯಣಸ್ವಾಮಿ, ಪಕ್ಷದ ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ, ಶಾಸಕರಾದ ಮೇಲೂರು ರವಿ, ಸಮೃದ್ಧಿ ಮಂಜುನಾಥ್, ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಶ್ರೀನಿವಾಸ ಮೂರ್ತಿ, ಹಿರಿಯ ಮುಖಂಡರಾದ ಜವರಾಯ ಗೌಡ, ಸಿಎಂಆರ್ ಶ್ರೀನಾಥ್, ಮುನೇಗೌಡ, ಬಂಗಾರಪೇಟೆ ಮಲ್ಲೇಶ್ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular