Friday, January 30, 2026
Google search engine
Homeಮುಖಪುಟಟೋಲ್ ದರ ಹೆಚ್ಚಳ ಹಗಲು ದರೋಡೆ ಎಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಟೋಲ್ ದರ ಹೆಚ್ಚಳ ಹಗಲು ದರೋಡೆ ಎಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ.22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ. ಇದು ಖಂಡನೀಯ. ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ಸರ್ಕಾರ ಎರಡೂ ಸೇರಿ ಜನರ ಮೇಲೆ ಮತ್ತಷ್ಟು ಭಾರ ಹೊರಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏಕಾಏಕಿ ಈ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ 30ರಿಂದ 200 ರೂ.ವರೆಗೆ ಟೋಲ್ ದರ ಹೆಚ್ಚಳ ಮಾಡಿರುವುದು ಸರಿಯಲ್ಲ, ಸಮರ್ಥನಿಯವೂ ಅಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿ ಟೋಲ್ ದರ ಹೆಚ್ಚಿಸಿರುವುದು ಹೆದ್ದಾರಿಯಲ್ಲಿ ಹಗಲು ದರೋಡೆ’ಯಷ್ಟೇ ಎಂದು ಹೇಳಿದ್ದಾರೆ.

ಎಕ್ಸ್ ಪ್ರೆಸ್ ಹೆದ್ದಾರಿಗೆ ಭೂಮಿ ಕೊಟ್ಟಿದ್ದು ಕರ್ನಾಟಕ ಸರ್ಕಾರ. ಇದ್ದ ನೆಲೆ ಕಳೆದುಕೊಂಡವರು ನಮ್ಮ ರೈತರು. ಈಗ 20% ಸುಲಿಗೆಗೆ ಒಳಗಾಗುತ್ತಿರುವವರು ಕೂಡ ಕನ್ನಡಿಗರೇ. ಕನ್ನಡಿಗರನ್ನು ಕೊಳ್ಳೆ ಹೊಡೆಯುವ ಧೂರ್ತ ನಡೆಗೆ ನಮ್ಮ ಧಿಕ್ಕಾರ ಎಂದಿದ್ದಾರೆ.

ಕೇಂದ್ರ, ರಾಜ್ಯ ಸರ್ಕಾರಗಳು ಬೆಲೆ ಏರಿಕೆಯನ್ನೇ ಅಧಿಕೃತ ವ್ಯವಹಾರ ಮಾಡಿಕೊಂಡಿವೆ. ಇನ್ನೂ ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳೆಂಬ ತುಪ್ಪ ಸವರಿ, ಅದೇ ಗ್ಯಾರಂಟಿಗಳ ಇಲಾಖೆಗಳ ಮೂಲಕವೇ ಜನರ ಮೇಲೆ ಮಣಭಾರ ಹೇರುತ್ತಿದೆ. ಒಂದು ಕೈಯ್ಯಲ್ಲಿ ಕೊಟ್ಟು ಎರಡು ಕೈಗಳಲ್ಲಿ ಬರೆ ಎಳೆಯುತ್ತಿದೆ ಎಂದು ಆರೋಪಿಸಿದರು.

ಹೆದ್ದಾರಿ ಪ್ರಾಧಿಕಾರವು ಹೆಚ್ಚಳ ಮಾಡಿರುವ ಟೋಲ್ ದರವನ್ನು ಕೂಡಲೇ ಹಿಂಪಡೆಯಬೇಕು. ಹೆದ್ದಾರಿ ಪ್ರಾಧಿಕಾರದ ಮೇಲೆ ರಾಜ್ಯ ಸರಕಾರ ಒತ್ತಡ ಹಾಕಬೇಕು. ಬೆಲೆಬರೆ ಬವಣೆಯಿಂದ ಬಸವಳಿದಿರುವ ಜನರು ರೊಚ್ಚಿಗೇಳುವ ಮುನ್ನ ಟೋಲ್ ದರ ಇಳಿಯಬೇಕು ಎಂದರು.

ಪ್ರತಿಪಕ್ಷವಾಗಿದ್ದಾಗ ಬೆಲೆ ಏರಿಕೆ ವಿರುದ್ಧ, ಆಡಳಿತ ಪಕ್ಷವಾದ ಮೇಲೆ ಬೆಲೆ ಏರಿಕೆ ಪರ ಇದ್ದರೆ ಜನರು ತಕ್ಕಪಾಠ ಕಲಿಸುತ್ತಾರೆ. ಊಸರವಳ್ಳಿ ವೈಖರಿ ಸಂಶಯಕ್ಕೆ ದಾರಿ. ಹಿಂದಿನ ಬಿಜೆಪಿ ಸರ್ಕಾರದ ದಾರಿಯಲ್ಲಿಯೇ ಈ ಸರಕಾರವೂ ನಡೆಯುತ್ತಿದೆಯಾ? ಎನ್ನುವ ಅನುಮಾನ ಆರಂಭದಲ್ಲಿಯೇ ಬರುತ್ತಿದೆ ಎಂದು ಟೀಕಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular