ಬೆಂಗಳೂರು : ರಾಜ್ಯ ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್ ನ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂನ್ 30 ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಜಗದೀಶ್ ಶೆಟ್ಟರ್, ಎನ್ ಎಸ್ ಬೋಸರಾಜ್ ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರು ಇಂದು ನಾಮಪತ್ರ ಸಲ್ಲಿಸಿದರು.
ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಶ್ರೀಮತಿ ಎಂ.ಕೆ.ವಿಶಾಲಾಕ್ಷಿ ಅವರು ನಾಮಪತ್ರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಮಧು ಬಂಗಾರಪ್ಪ ಅವರು ಉಪಸ್ಥಿತರಿದ್ದರು.


