ತುಮಕೂರು ಜಿಲ್ಲಾ ವಾಲ್ಮೀಕಿ ಸಮಾಜದ ವತಿಯಿಂದ ನೂತನ ಸಚಿವರು , ಶಾಸಕರು , ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಜಿಲ್ಲಾ ಅಧ್ಯಕ್ಷ ಪುರುಷೋತ್ತಮ್ ತಿಳಿಸಿದ್ದಾರೆ.
ಮಧುಗಿರಿಯಲ್ಲಿ ಅಭಿನಂದನಾ ಸಮಾರಂಭದ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು ತುಮಕೂರಿನ ಅಮಾನಿಕೆರೆಯ ಗಾಜಿನ ಮನೆಯಲ್ಲಿ ಬೃಹತ್ ಅಭಿನಂದನಾ ಸಮಾರಂಭವನ್ನು ವಾಲ್ಮೀಕಿ ಪ್ರಸನ್ನಾಂದ ಪುರಿ ಸ್ವಾಮೀಜಿ, ಶಿಡ್ಲೇಕೋಣದ ಸಂಜಯ್ ಕುಮಾರ ಸ್ವಾಮೀಜಿಯ ಸಮ್ಮುಖದಲ್ಲಿ ಜೂನ್ 25 ರ ಭಾನುವಾರ ಬೆಳಗ್ಗೆ 10:30 ಘಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯದ ವಾಲ್ಮೀಕಿ ಸಮುದಾಯದ ನೂತನ ಸಚಿವರು , ಶಾಸಕರು , ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರನ್ನು ಜಿಲ್ಲಾ ಸಂಘ ಹಾಗೂ ನಾಯಕ ಸಂಘಟನೆ ಮತ್ತು ಸಂಸ್ಥೆ ಗಳ ವತಿಯಿಂದ ಅಭಿನಂದಿಸಲಾಗುತ್ತಿದ್ದು , ಜಿಲ್ಲೆಯ ಪ್ರತಿಯೊಂದು ತಾಲೂಕು ಕೇಂದ್ರಗಳಲ್ಲಿರುವ ಮುಖಂಡರನ್ನು ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತಿದೆ. ಅಂದೂ ಜಿಲ್ಲೆಯ ಸಮಸ್ತ ವಾಲ್ಮೀಕಿ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯ ಕ್ರಮವನ್ನು ಯಶಸ್ವಿಗೊಳಿಸುವಂತೆ ಕೋರಿದರು.
ಮಾಧ್ಯಮಗೋಷ್ಠಿಯಲ್ಲಿ ಮುಖಂಡರಾದ ಗುಬ್ಬಿ ನಾಗರಾಜು , ಆಂಜನೇಯಲು , ಹನುಮಂತರಾಯಪ್ಪ , ಜಿ.ಎಸ್.ಜಗದೀಶ್ ಕುಮಾರ್ , ಶಂಕರನಾರಾಯಣಬಾಬು , ಬೆಸ್ಕಾಂ ನಿವೃತ್ತ ಅಧಿಕಾರಿ ಮುದ್ದುಕೃಷ್ಣ , ದೊಡ್ಡೇರಿ ಶಿವಣ್ಣ , ರಂಜಿತ್ , ನಾರಾಯಣಪ್ಪ , ಚಂದ್ರಮ್ಮ ಹಾಗೂ ಮತ್ತಿತರರು ಇದ್ದರು.


