ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪಿ.ಎಂ.ಮಣ್ಣೂರ ಅವರ ಜನ್ಮದಿನ ಹಾಗೂ ಸತ್ಯಕಾಮ ದಿನಪತ್ರಿಕೆಯ 50ನೇ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಸತ್ಯಕಾಮ ಸಮ್ಮಾನ್ ಪುರಸ್ಕಾರಕ್ಕೆ ಆರು ಜನ ಹಿರಿಯ ಪತ್ರಕರ್ತರನ್ನು ಆಯ್ಕೆ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪಿ.ಎಂ.ಆನಂದ್ ತಿಳಿಸಿದ್ದಾರೆ.
ಸತ್ಯಕಾಮ ಸಮ್ಮಾನ್ ಪ್ರಶಸ್ತಿಯನ್ನು ಜುಲೈ 1ರಂದು ಈ ಆರು ಮಂದಿ ಹಿರಿಯ ಪತ್ರಕರ್ತರಿಗೆ ಪ್ರದಾನ ಮಾಡಲಿದ್ದು, ಕಲಬುರುಗಿಯ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಅಂದು ಸಂಜೆ 5 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದ್ದಾರೆ.
ಹಿರಿಯ ಪತ್ರಕರ್ತರಾದ ಶ್ರೀಕಾಂತ್ ಚಾರ್ಯ ಮಣ್ಣೂರ, ಎಸ್.ಪಿ.ಜೋಶಿ, ಶೀಲಾ ತಿವಾರಿ, ಕೇದಾರಲಿಂಗಯ್ಯ ಹಿರೇಮಠ, ಮೊಯಿನೋದ್ದೀನ್ ಪಾಷಾ, ಮಹಿಪಾಲ ರೆಡ್ಡಿ ಅವರಿಗೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸತ್ಯಕಾಮ ಪತ್ರಿಕೆಯ 50ನೇ ವರ್ಷಾಚರಣೆಯ ಸಂಭ್ರಮದ ಹಿನ್ನೆಲೆಯಲ್ಲಿ ಈ ಪುರಸ್ಕಾರವನ್ನು ಪ್ರಸಕ್ತ ವರ್ಷದಿಂದ ಆರಂಭಿಸಲಾಗಿದ ಎಂದು ಹೇಳಿದ್ದಾರೆ.


