ಸಮೃದ್ಧಿ ಮಹಾಮಾರ್ಗ್ ಎಕ್ಸ್ಪ್ರೆಸ್ವೇಯಲ್ಲಿ ಮಹಾರಾಷ್ಟ್ರದ ಯವತ್ಮಾಲ್ನಿಂದ ಪುಣೆಗೆ ತೆರಳುತ್ತಿದ್ದ ಬಸ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 25 ಜನರು ಸಜೀವ ದಹನವಾಗಿದ್ದಾರೆ. ಶನಿವಾರ ನಸುಕಿನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಎಂಟು ಮಂದಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಬಸ್ ನ ಚಕ್ರ ಸ್ಪೋಟಿಸಿ ಬೆಂಕಿ ಹೊತ್ತಿಕೊಂಡಿತು. ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ಸಿನಿಂದ 25 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬಸ್ಸಿನಲ್ಲಿ ಒಟ್ಟು 32 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. 6-8 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬುಲ್ಧಾನಾ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಬುಲ್ಧಾನ ಪೊಲೀಸ್ ಉಪ ಎಸ್ಪಿ ಬಾಬುರಾವ್ ಮಹಾಮುನಿ ತಿಳಿಸಿದ್ದಾರೆ.


