ಝನ್ ಟೀಮ್ ಮತ್ತು ಡಾ.ಡಿ.ವಿ.ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ ತುಮಕೂರು ವಿವಿ ವತಿಯಿಂದ ಆಗಸ್ಟ್ 10ರಂದು ಬೆಳಗ್ಗೆ 11 ಗಂಟೆಗೆ ತುಮಕೂರು ವಿಶ್ವವಿದ್ಯಾನಿಲಯದ ಡಾ. ಸರ್ ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಬಿ.ಆರ್.ಜಯರಾಮ ರಾಜೇ ಅರಸ್ ಅನುವಾದಿಸಿರುವ ಹೆಣ ಹೊರುವವನ ವೃತ್ತಾಂತ ಕೃತಿ ಬಿಡುಗಡೆ ಸಮಾರಂಭ ಏರ್ಪಡಿಸಲಾಗಿದೆ.
ಬಂಡಾಯ ಸಂಘಟನೆಯ ಮುಖ್ಯಸ್ಥರು ಹಾಗೂ ನಾಡೋಜ ಬರಗೂರು ರಾಮಚಂದ್ರಪ್ಪ ಅವರು ಕೃತಿಯನ್ನು ಬಿಡುಗಡೆ ಮಾಡುವರು. ತುಮಕೂರು ವಿವಿ ಕುಲಸಚಿವೆ ನಾಹಿದಾ ಜಮ್ ಜಮ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಕೃತಿ ಕುರಿತು ಸಹಾಯಕ ಪ್ರಾಧ್ಯಾಪಕಿ ಡಾ.ಗೀತಾ ವಸಂತ ಮಾತನಾಡುವರು. ಮುಖ್ಯ ಅತಿಥಿಯಾಗಿ ಡಾ.ವಿ.ವಿ.ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಮುಖ್ಯಸ್ಥೆ ಪ್ರೊ.ಅಣ್ಣಮ್ಮ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಬಿ.ಆರ್.ಜಯರಾಮರಾಜೇ ಅರಸ್, ಝನ್ ಟೀಮ್ ಮುಖ್ಯಸ್ಥ ಉಗಮ ಶ್ರೀನಿವಾಸ್, ಲೇಖಕ ಕೆ.ಪಿ. ಲಕ್ಷ್ಮೀಕಾಂತರಾಜೇ ಅರಸ್ ಪಾಲ್ಗೊಳ್ಳುವರು.