Friday, September 20, 2024
Google search engine
Homeಮುಖಪುಟಶಕ್ತಿ ಯೋಜನೆ ನಿಲ್ಲುವುದಿಲ್ಲ - ಊಹಾಪೋಹಗಳಿಗೆ ತೆರೆ ಎಳೆದ ಸಚಿವ ರಾಮಲಿಂಗಾರೆಡ್ಡಿ

ಶಕ್ತಿ ಯೋಜನೆ ನಿಲ್ಲುವುದಿಲ್ಲ – ಊಹಾಪೋಹಗಳಿಗೆ ತೆರೆ ಎಳೆದ ಸಚಿವ ರಾಮಲಿಂಗಾರೆಡ್ಡಿ

ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲಿಸುವುದಿಲ್ಲ. ಮುಂದಿನ 10 ವರ್ಷವೂ ಶಕ್ತಿ ಯೋಜನೆ ಮುಂದುವರಿಯಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಮಂಡ್ಯದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಶಕ್ತಿ ಯೋಜನೆ ನಿಲ್ಲುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಶಕ್ತಿ ಯೋಜನೆಯನ್ನು ನಿಲ್ಲಿಸಲಾಗುತ್ತದೆ ಎನ್ನುವುದು ಸುಳ್ಳು ಮುಂದಿನ 10 ವರ್ಷವೂ ಶಕ್ತಿ ಯೋಜನೆ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ಒಂದು ಪಕ್ಷದಿಂದ ಸಾಮಾಜಿಕ ಜಾಲತಾಣಗಳಲ್ಲಿ ಶಕ್ತಿ ಯೋಜನೆ ನಿಲ್ಲಿಸುವ ಸುಳ್ಳು ಸುದ್ದಿಯನ್ನು ಹರಡುತ್ತ ಅಪಪ್ರಚಾರ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲುವುದಿಲ್ಲ. ಮಹಿಳೆಯರು ಪಾಸ್ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular