ಆಗಸ್ಟ್ 15 ರಿಂದ ಸೆಪ್ಟೆಂಬರ್ 20ರವರೆಗೆ ನಂದಿನಿ ಸಿಹಿ ಉತ್ಪನ್ನಗಳ ಮಾರಾಟ ದರಗಳ ಮೇಲೆ ಶೇ.20ರಷ್ಟು ರಿಯಾಯಿತಿ ನೀಡಲಾಗಿದ್ದು, ಗ್ರಾಹಕರು ಇದನ್ನು ಬಳಸಿಕೊಳ್ಳಬೇಕು ಎಂದು ತುಮುಲ್ ಅಧ್ಯಕ್ಷ ಮಹಾಲಿಂಗಯ್ಯ ಹೇಳಿದ್ದಾರೆ
ರಾಜ್ಯದಲ್ಲಿ ಕೆಎಂಎಫ್ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ತುಮಕೂರು ನಗರದ ಬಿ.ಎಚ್.ರಸ್ತೆಯಲ್ಲಿರುವ ಗ್ರಾಹಕರ ಸೇವಾ ಕೇಂದ್ರದಲ್ಲಿ ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಗಸ್ಟ್ 15 ರಿಂದ ಸೆಪ್ಟೆಂಬರ್ 20ರವರೆಗೆ ನಂದಿನಿ ಸಿಹಿ ಉತ್ಸವ ನಡೆಯಲಿದ್ದು ಗ್ರಾಹಕರು ಇದರ ಸದುಪಯೋಗ ಪಡೆಯಬೇಕು ಎಂದು ಮಹಾಲಿಂಗಪ್ಪ ತಿಳಿಸಿದ್ದಾರೆ.
ಕೆಎಂಎಫ್ ವತಿಯಿಂದ ಸ್ವಾತಂತ್ರ್ಯೋತ್ಸವ, ವರಮಹಾಲಕ್ಷ್ಮಿ ಸೇರಿದಂತೆ ಸಾಲು ಸಾಲು ಹಬ್ಬಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ನಂದಿನಿ ಸಿಹಿ ಉತ್ಪನ್ನಗಳ ಮೇಲೆ ಶೇ.20ರಷ್ಟು ನೀಡುವ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಹಾಗಾಗಿ ರಾಜ್ಯಾದ್ಯಂತ ಸಿಹಿ ಉತ್ಸವ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ತುಮುಲ್ ವ್ಯವಸ್ಥಾಪಕ ನಿರ್ದೇಶಕ ಜಿ. ಶ್ರೀನಿವಾಸ್, ಮಾರುಕಟ್ಟೆ ವ್ಯವಸ್ಥಾಪಕ ಎಚ್.ಎಂ. ವಿದ್ಯಾನಂದ್, ಉಪ ವ್ಯವಸ್ಥಾಪಕ ರವಿಕಿರಣ್, ಸಹಾಯಕ ವ್ಯವಸ್ಥಾಪಕಿ ಶಿಲ್ಪ ಇತರರು ಇದ್ದರು.


