Monday, March 16, 2026
Google search engine
Homeಮುಖಪುಟಉದ್ಯೋಗ ಸೃಷ್ಟಿ ನಿರಂತರ ಪ್ರಕ್ರಿಯೆ - ಸಿಎಂ ಸಿದ್ದರಾಮಯ್ಯ

ಉದ್ಯೋಗ ಸೃಷ್ಟಿ ನಿರಂತರ ಪ್ರಕ್ರಿಯೆ – ಸಿಎಂ ಸಿದ್ದರಾಮಯ್ಯ

ಉದ್ಯೋಗ ಸೃಷ್ಟಿ ಎನ್ನುವುದು ನಿರಂತರ ಪ್ರಕ್ರಿಯೆ. ನಿರುದ್ಯೋಗ ನಿವಾರಣೆಗೆ ಉದ್ಯೋಗ ಸೃಷ್ಟಿಯೊಂದೇ ಪರಿಹಾರ. ನಾಡಿನ ದುಡಿಯುವ ಯುವ ಕೈಗಳಿಗೆ ದುಡಿಮೆಯ ಮಾರ್ಗಗಳನ್ನು ಅನ್ವೇಷಿಸಲು ನಮ್ಮ ಸರ್ಕಾರವು ಸದಾ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ 15 ಸಾವಿರ ಉದ್ಯೋಗವಕಾಶ ಸೃಷ್ಟಿಸಲು ಮೂರು ಪ್ರತಿಷ್ಠಿತ ಕಂಪನಿಗಳೊಂದಿಗೆ ರೂ.5,258 ಕೋಟಿ ಬಂಡವಾಳ ಹೂಡಿಕೆಯ ಒಪ್ಪಂದ ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ.

ನಿರುದ್ಯೋಗಿ ಯುವಜನರಿಗೆ ಆರ್ಥಿಕ ನೆರವು ನೀಡುವ ಜೊತೆಜೊತೆಗೆ ವಿಫುಲ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಹ ನಾವು ಬದ್ಧರಿದ್ದೇವೆ ಎಂದು ಭರವಸೆ ನೀಡಿದ್ದಾರೆ.

ನಮ್ಮ ಮೊದಲ 100 ದಿನಗಳ ಆಡಳಿತದಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ ಎಂದು ಹೇಳಿದ್ದಾರೆ.

ಗ್ಯಾರಂಟಿಗಳ ಈಡೇರಿಕೆಯ ಜೊತೆಗೆ ಅಭಿವೃದ್ಧಿಯ ರಥವನ್ನು ಮುನ್ನಡೆಸುತ್ತಿರುವ ನಮ್ಮೊಂದಿಗೆ ನಿಮ್ಮೆಲ್ಲರ ಸಹಕಾರವಿರಲಿ ಎಂದು ಸಿದ್ದರಾಮಯ್ಯ ಕೋರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular