ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ರಸ್ತೆಗಳು ಮಹತ್ವದ ಪಾತ್ರವಹಿಸುತ್ತವೆ. ರಸ್ತೆ ಅಭಿವೃದ್ಧಿಯಿಂದ ಗ್ರಾಮಗಳ ಅಭ್ಯುದಯ ಸಾಧ್ಯವಾಗುತ್ತದೆ ಎಂದು ಶಾಸಕ ಬಿ ಸುರೇಶ್ ಗೌಡ ತಿಳಿಸಿದರು.
ತುಮಕೂರು ಗ್ರಾಮಾಂತರ ಕ್ಷೇತ್ರದ ಹುಳ್ಳೇನಹಳ್ಳಿ ಮುಖ್ಯರಸ್ತೆಯಿಂದ ತೋಪೇಗೌಡನಪಾಳ್ಯಕ್ಕೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಮುಖೇನ ಕ್ಷೇತ್ರದ ಜನರ ಋಣ ತೀರಿಸುವಂತಹ ಕೆಲಸವನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಹೇಳಿದರು.
ಓಆರ್ ಎಫ್ ಯೋಜನೆಯಡಿಯಲ್ಲಿ ಕ್ಷೇತ್ರದ ರಸ್ತೆ ಸುಧಾರಣೆ ಮತ್ತು ರಸ್ತೆ ಅಭಿವೃದ್ಧಿಗಾಗಿ ರೂ 70.00 ಲಕ್ಷ ಅನುದಾನ ಬಿಡುಗಡೆ ಮಾಡಿಸಿದ್ದು ಸದರಿ ಅನುದಾನದಲ್ಲಿ ಈ ಭಾಗದ ನಾಲ್ಕರು ಗ್ರಾಮಗಳಿಗೆ ಉತ್ತಮ ರಸ್ತೆ ಸಂಪರ್ಕ ಕಲ್ಪಿಸಿಕೊಡುವುದಾಗಿ ತಿಳಿಸಿದರು.