Saturday, October 19, 2024
Google search engine
Homeಜಿಲ್ಲೆಚಿತ್ರದುರ್ಗ ಸಮೀಪ ನಿಂತಿದ್ದ ಲಾರಿಗೆ ಗುದ್ದಿದ ಕಾರು - ಸ್ಥಳದಲ್ಲೇ ತುಮಕೂರಿನ ನಾಲ್ವರ ಸಾವು

ಚಿತ್ರದುರ್ಗ ಸಮೀಪ ನಿಂತಿದ್ದ ಲಾರಿಗೆ ಗುದ್ದಿದ ಕಾರು – ಸ್ಥಳದಲ್ಲೇ ತುಮಕೂರಿನ ನಾಲ್ವರ ಸಾವು

ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮಲ್ಲಾಪುರದ ಗೊಲ್ಲರಹಟ್ಟಿಯ ಬಳಿ ಸಂಭವಿಸಿದೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿಯಿಂದ ತುಮಕೂರಿಗೆ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಮಲ್ಲಾಪುರ ಗೊಲ್ಲರಹಟ್ಟಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿ ಏಳು ಮಂದಿ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಕಲೀಲ್, ತಬೀಜ್, ಶಂಶುದ್ದೀನ್, ಮಲ್ಲಿಕಾ ಮೃತಪಟ್ಟಿದ್ದು ಅವರೆಲ್ಲರೂ ತುಮಕೂರು ನಗರದವರೆಂದು ತಿಳಿದುಬಂದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ನರ್ಗೀಸ್, ರೆಹಾನ್ ಮತ್ತು ರೆಹಮಾನ್ ಅವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮೃತದೇಹಗಳನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular