Monday, March 16, 2026
Google search engine
Homeಮುಖಪುಟಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ - ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸ್ಪಷ್ಟನೆ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ – ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸ್ಪಷ್ಟನೆ

ಭಾರತೀಯ ಜನತಾ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಮಾತುಕತೆ ನಡೆದಿರುವುದು ನಿಜ. ಆದರೆ ಸೀಟು ಹಂಚಿಕೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ದೇವೇಗೌಡ ಸೀಟು ಹಂಚಿಕೆ ಕುರಿತು ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ.

ನಮಗೆ ಎಷ್ಟು ಸೀಟು ಬೇಕು ಎಂದು ನಾವು ಕೇಳುವುದಿಲ್ಲ. ಸೀಟು ಹಂಚಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜೊತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡುತ್ತಾರೆ ಎಂದು ತಿಳಿಸಿದ್ದಾರೆ.

ಪಕ್ಷವನ್ನು ಉಳಿಸುವ ದೃಷ್ಟಿಯಿಂದ ದೆಹಲಿ ನಾಯಕರನ್ನು ಭೇಟಿ ಮಾಡಿದ್ದೇನೆ. ಪ್ರತಿ ಕ್ಷೇತ್ರದ ಪರಿಸ್ಥಿತಿಯನ್ನು ಬಿಜೆಪಿ ನಾಯಕರಿಗೆ ವಿವರಿಸಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ವಿಜಯಪುರ, ರಾಯಚೂರು, ಬೀದರ್ ನಲ್ಲಿ ಬಿಜೆಪಿಗೆ ಬೆಂಬಲ ನೀಡುತ್ತೇವೆ. ಅಲ್ಲಿ ನಾವು ಬೆಂಬಲ ನೀಡಿದರೆ ಮಾತ್ರ ಬಿಜೆಪಿ ಗೆಲುವು ಸಾಧಿಸಲು ಸಾಧ್ಯ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular