Monday, March 16, 2026
Google search engine
Homeಮುಖಪುಟಖಾಸಗಿ ಸಾರಿಗೆಯವರಿಗೆ ನಷ್ಟ ತುಂಬಿಕೊಡಲು ಸಾಧ್ಯವಿಲ್ಲ - ಸಿಎಂ ಸಿದ್ದರಾಮಯ್ಯ

ಖಾಸಗಿ ಸಾರಿಗೆಯವರಿಗೆ ನಷ್ಟ ತುಂಬಿಕೊಡಲು ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ

ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ ಸಂಸ್ಥೆಗಳಿಗೆ ನಷ್ಟ ಉಂಟಾಗುತ್ತದೆ ಎಂಬುದು ಸಮರ್ಥನೀಯವಲ್ಲ. ಹೀಗಾಗಿ ಖಾಸಗಿ ಸಾರಿಗೆಯವರ ನಷ್ಟ ತುಂಬಿಕೊಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆಯು ಮಹಿಳೆಯರಿಗಾಗಿ ಮಾಡಿರುವ ಸರ್ಕಾರದ ಯೋಜನೆ. ಇದರಿಂದ ಖಾಸಗಿ ಸಾರಿಗೆಯವರಿಗೆ ನಷ್ಟ ಉಂಟಾಗಿದೆ ಎಂಬುದನ್ನು ಒಪ್ಪಲು ಆಗುವುದಿಲ್ಲ. ಆದ್ದರಿಂದ ತುಂಬಿ ಕೊಡಲು ಆಗಲ್ಲ ಎಂದು ತಿಳಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಅಥವಾ ಬಂದ್ ಮಾಡಲು ಎಲ್ಲರಿಗೂ ಹಕ್ಕಿದೆ. ಅದು ಶಾಂತಿಯುತವಾಗಿರಬೇಕು. ನಾವು ಶಕ್ತಿ ಯೋಜನೆಯನ್ನು ಮಹಿಳೆಯರಿಗಾಗಿ ಜಾರಿಗೆ ತಂದಿದ್ದೇವೆ. ಆದ್ದರಿಂದ ಖಾಸಗಿ ಸಾರಿಗೆ ಸಂಸ್ಥೆಗಳಿಗೆ ನಷ್ಟ ಆಗಿದೆ ಎನ್ನುತ್ತಾರೆ.

ಖಾಸಗಿ ಸಾರಿಗೆಯವರಿಗೆ ನಷ್ಟ ತುಂಬಿಕೊಡಿ ಎಂಬ ಬೇಡಿಕೆ ಇದೆ. ಸಾರಿಗೆಯವರ ಈ ಬೇಡಿಕೆ ಈಡೇರಿಸಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular