ಮುಂಬರುವ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಸೂತ್ರಗಳು ಮತ್ತು ಸಾಮೂಹಿಕ ಪ್ರಚಾರ ಕಾರ್ಯತಂತ್ರಗಳ ಬಗ್ಗೆ ಸೆಪ್ಟೆಂಬರ್ 13ರಂದು ಇಂಡಿಯಾ ಮೈತ್ರಿಕೂಟದ ಸಮನ್ವಯ ಸಮಿತಿಯ ಮೊದಲ ಸಭೆ ಎನ್.ಸಿ.ಪಿ ಮುಖ್ಯಸ್ಥ ಶರದ್ ಪವಾರ್ ಅವರ ನವದೆಹಲಿಯ ನಿವಾಸದಲ್ಲಿ ಚರ್ಚಿಸಲಾಗುವುದು ಎಂದು ಸಿಪಿಐ ನಾಯಕ ಡಿ.ರಾಜಾ ಹೇಳಿದ್ದಾರೆ.
ಮುಂಬರುವ ರಾಜಸ್ಥಾನ, ಮಧ್ಯಪ್ರದೇಶ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಗೆ ಪಕ್ಷಗಳು ಸೀಟು ಹಂಚಿಕೆ ಕುರಿತು ಚರ್ಚೆಗಳನ್ನು ಮುಂದುವರೆಸುತ್ತದೆ. ಪಕ್ಷಗಳು ಈಗಾಗಲೇ ರಾಜ್ಯ ಮಟ್ಟದಲ್ಲಿ ಕೆಲವು ಮಾತುಕತೆಗಳನ್ನು ಪ್ರಾರಂಭಿಸಿವೆ ಎಂದು ತಿಳಿಸಿದ್ದಾರೆ.
ಸಮನ್ವಯ ಸಮಿತಿ ರಚನೆಯಾದ ನಂತರ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ. ಪಕ್ಷಗಳು ಈಗಾಗಲೇ ರಾಜ್ಯ ಮಟ್ಟದಲ್ಲಿ ಕೆಲವು ಮಾತುಕತೆಗಳನ್ನು ಪ್ರಾರಂಭಿಸಿದ್ದು, ತೆಲಂಗಾಣದಲ್ಲಿ ಕೆಲವು ಮಾತುಕತೆಗಳು ನಡೆಯುತ್ತಿವೆ . ಮಾತುಕತೆಯಲ್ಲಿ ಆಗಿರುವ ಪ್ರಗತಿಯ ಬಗ್ಗೆ ಚರ್ಚೆ ನಡೆಸುತ್ತೇವೆ. ಮಾತುಕತೆಯನ್ನು ಹೇಗೆ ಮುಂದಕ್ಕೆ ಕೊಂಡೊಯ್ಯಬೇಕು ಎಂಬುದರ ಕುರಿತು ನಾನು ನಮ್ಮ ಸಲಹೆಗಳನ್ನು ಹಂಚಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಚುನಾವಣೆ ಇನ್ನೂ ಘೋಷಣೆಯಾಗದ ಕಾರಣ ಸೀಟು ಹಂಚಿಕೆ ಮಾತುಕತೆಗೆ ಅವರು ಗಡುವನ್ನು ನಿಗದಿಪಡಿಸಿಲ್ಲ. ವಿವಿಧ ರಾಜ್ಯಗಳಲ್ಲಿ ನಡೆಯಲಿರುವ ಬೃಹತ್ ಆಭಿಯಾನಗಳ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ರಾಜಾ ಹೇಳಿಕೆಯನ್ನು ಉಲ್ಲೇಖಿಸಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ನಮ್ಮ ಮುಂಬೈ ಸಭೆಯಲ್ಲಿ ಸಾಮೂಹಿಕ ಕಾರ್ಯಕ್ರಮಗಳನ್ನು ಆಯೋಜಿಸಲು ತೆಗೆದುಕೊಳ್ಳಬೇಕಾದ ಕೆಲವು ವಿಷಯಗಳನ್ನು ನಾವು ಚರ್ಚಿಸಿದ್ದೇವೆ ಎಂದು ಹೇಳಿದ್ದಾರೆ.


