Saturday, July 27, 2024
Google search engine
Homeಮುಖಪುಟತುಮಕೂರು ಜಿಲ್ಲೆಯಲ್ಲಿ ಜೆಡಿಎಸ್-ಬಿಜೆಪಿ ತೊರೆಯುವವರ ಸಂಖ್ಯೆ ಹೆಚ್ಚಿದೆ - ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್-ಬಿಜೆಪಿ ತೊರೆಯುವವರ ಸಂಖ್ಯೆ ಹೆಚ್ಚಿದೆ – ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್ ತೊರೆಯುವವರ ದೊಡ್ಡ ತಂಡವೇ ಸಿದ್ದವಿದೆ ಎಂದು ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್. ಶ್ರೀನಿವಾಸ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನಲ್ಲಿ ಜಲಜೀವನ್ ಮಿಷಿನ್ ಯೋಜನೆಯ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಜೆಡಿಎಸ್ ಮತ್ತು ಬಿಜೆಪಿ ತೊರೆಯುವ ದೊಡ್ಡ ತಂಡವೇ ಸಿದ್ದರಿದ್ದು ಅವರೆಲ್ಲರೂ ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ಎರಡು ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಎರಡೂ ಪಕ್ಷಗಳಲ್ಲಿ ಮೈತ್ರಿಗೆ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕುರಿತು ಅಸಮಾಧಾನ ಹೊಂದಿರುವವರು ಹೆಚ್ಚಿನ ಸಂಖ್ಯೆಯಲ್ಲಿದ್ದು ಅವರೆಲ್ಲರೂ ನನ್ನ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ಜಿಲ್ಲೆಯ ಹಲವು ಕ್ಷೇತ್ರದ ಮುಖಂಡರು ಮತ್ತು ಪ್ರಮುಖ ಕಾರ್ಯಕರ್ತರು ನನ್ನ ಸಂಫರ್ಕದಲ್ಲಿದ್ದು ಜೆಡಿಎಸ್ ತೊರೆಯುವವರ ಪಟ್ಟಿ ದೊಡ್ಡದಾಗಿ ಬೆಳೆಯುತ್ತಿದೆ. ಹೀಗಾಗಿ ಅವರೆಲ್ಲರೂ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಯಾರ ಹೆಸರನ್ನು ಉಲ್ಲೇಖಿಸದೆ ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular