Monday, September 16, 2024
Google search engine
Homeಚಳುವಳಿಕರ್ನಾಟಕ ಬಂದ್ ಗೆ ಬೆಂಬಲ ಇಲ್ಲ ಎಂದ ತುಮಕೂರು ದಲಿತ ಸಂಘಟನೆಗಳು

ಕರ್ನಾಟಕ ಬಂದ್ ಗೆ ಬೆಂಬಲ ಇಲ್ಲ ಎಂದ ತುಮಕೂರು ದಲಿತ ಸಂಘಟನೆಗಳು

ಕಾವೇರಿ ವಿಚಾರವಾಗಿ ಕನ್ನಡ ಪರ ಸಂಘಟನೆಗಳು ಸೆಪ್ಟಂಬರ್ 29 ರಂದು ಕರೆದಿರುವ ಸಮಗ್ರ ಕರ್ನಾಟಕ ಬಂದ್‌ಗೆ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ದಂಡು ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟ ಬೆಂಬಲ ನೀಡುವುದಿಲ್ಲ ಎಂದು ಘೋಷಿಸಿವೆ.

ತುಮಕೂರು ನಗರದ ಅಂಬೇಡ್ಕರ್ ಭವನದಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ನೇತೃತ್ವದಲ್ಲಿ ಸಭೆ ಸೇರಿದ್ದ ದಲಿತ ಸಂಘಟನೆಗಳು, ಕಾವೇರಿ ಜಲವಿವಾದ ಕುರಿತು ಚರ್ಚೆ ನಡೆಸಿ, ಜನಸಾಮಾನ್ಯರಿಗೆ ಮಾರಕವಾಗಿರುವ ಬಂದ್ ಬದಲು, ಶಾಂತಿಯುತ ಪ್ರತಿಭಟನೆಯ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಗಮನ ಸೆಳೆಯಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಈ ಕುರಿತು ಮಾತನಾಡಿದ ದಸಂಸ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತೀರ್ಮಾನದಲ್ಲಿ ನಾವು ಮದ್ಯ ಪ್ರವೇಶಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿರುವಾಗ, ಯಾವ ಪುರುಷಾರ್ಥಕ್ಕಾಗಿ ಕನ್ನಡ ಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ ಎಂಬುದು ತಿಳಿಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಾವೇರಿ ಟ್ರೂಬ್ಯುನಲ್‌ನಲ್ಲಿ ಮಳೆಯಿಲ್ಲದ ಬರಗಾಲದಂತಹ ಸಂಕಷ್ಟ ಸಮಯದಲ್ಲಿ ಯಾವ ಸೂತ್ರ ಅನುಸರಿಸಬೇಕು ಎಂದು ಸ್ಪಷ್ಟವಾಗಿ ಹೇಳಿಲ್ಲ. ಇದು ಕರ್ನಾಟಕವನ್ನು ಬರಗಾಲದಂತಹ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಿ, ಸಂಕಷ್ಟ ಸೂತ್ರ ಸಿದ್ದಪಡಿಸಬೇಕಿದೆ ಎಂದು ಹೇಳಿದರು.

ರಾಜ್ಯದಿಂದ ಆಯ್ಕೆಯಾಗಿ ಹೋಗಿರುವ 28 ಜನ ಸಂಸತ್ ಸದಸ್ಯರು ಈ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು. ಆದರೆ ಒಬ್ಬರೂ ತುಟಿ ಬಿಚ್ಚುತ್ತಿಲ್ಲ. ಕನ್ನಡ ಪರ ಸಂಘಟನೆಗಳಿಗೆ ನಿಜವಾಗಿಯೂ ರಾಜ್ಯದ ಜನರ ಬಗ್ಗೆ ಕಾಳಜಿ ಇದ್ದರೆ ಮೊದಲು ಸಂಸದರು ಬಾಯಿ ತೆರೆದು ಮಾತನಾಡುವಂತೆ, ರಾಜ್ಯದ ಕಷ್ಟವನ್ನು ಪ್ರಧಾನಿ ಮತ್ತು ಒಕ್ಕೂಟ ಸರ್ಕಾರದ ನೀರಾವರಿ ಮಂತ್ರಿಗಳಿಗೆ ಮನವರಿಕೆ ಮಾಡಿಕೊಡುವಂತೆ ಒತ್ತಡ ತರಬೇಕು. ಇದನ್ನು ಬಿಟ್ಟು ಬಂದ್ ನಂತಹ ಕಾರ್ಯಕ್ರಮದಿಂದ ಜನಸಾಮಾನ್ಯರಿಗೆ ಯಾವುದೇ ಉಪಯೋಗವಾಗದು ಎಂದರು.

ರಾಜ್ಯದಲ್ಲಿ ಒಂದರ ಹಿಂದೆ ಒಂದು ಕನ್ನಡ ಶಾಲೆಗಳು ಮುಚ್ಚುತ್ತಿವೆ, ಖಾಸಗಿ ಶಾಲೆಗಳ ಕಾರ್ಪೋರೆಟ್ ಶುಲ್ಕ ಭರಿಸುವುದು ಸಾಮಾನ್ಯ ಜನರಿಗೆ ಕಷ್ಟವಾಗಿದೆ. ಇದರ ಬಗ್ಗೆ ಎಂದಿಗೂ ಕನ್ನಡಪರ ಸಂಘಟನೆಗಳು ದ್ವನಿ ಎತ್ತಿಲ್ಲ. ಸೌಜನ್ಯಳ ಅತ್ಯಾಚಾರ, ಕೊಲೆ ಕೇಸ್ ಸೇರಿದಂತೆ ರಾಜ್ಯದಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯಗಳ ಬಗ್ಗೆ ಕಿಂಚಿತ್ತು ದ್ವನಿ ಎತ್ತದ ಕನ್ನಡ ಪರ ಸಂಘಟನೆಗಳು, ಈಗಾಗಲೇ ಒಕ್ಕೂಟ ಸರ್ಕಾರದ ಅಂಗಳದಲ್ಲಿರುವ ಕಾವೇರಿ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿರುವುದು ಹಾಸ್ಯಾಸ್ಪದವಾಗಿದೆ ಎಂದಿದ್ದಾರೆ.

ಸಭೆಯಲ್ಲಿ ಅಂಬೇಡ್ಕರ್ ದಂಡು ಜಿಲ್ಲಾಧ್ಯಕ್ಷ ಎನ್.ಕುಮಾರ್, ಲಕ್ಷ್ಮಮ್ಮ ವಿದ್ಯಾರ್ಥಿ ಒಕ್ಕೂಟದ ಟಿ.ಎನ್.ಮಧು, ಅಲ್ಪಸಂಖ್ಯಾತರ ತಾಲೂಕು ಘಟಕ ಅಧ್ಯಕ್ಷ ಯೂಸೂಫ್, ಎ.ಸುನಿಲ್, ಸಲ್ಮಾ, ರಘುಪ್ರಸಾದ್, ಸುಪ್ರೀಮ್ ಟಿ..ಆರ್, ರಂಗಪ್ಪ ಮತ್ತಿತರರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular