Saturday, October 19, 2024
Google search engine
Homeಜಿಲ್ಲೆತುಮಕೂರು -ಕ್ಷುಲ್ಲಕ ಕಾರಣಕ್ಕೆ ಜಗಳ - ವ್ಯಕ್ತಿಯ ಕೊಲೆ

ತುಮಕೂರು -ಕ್ಷುಲ್ಲಕ ಕಾರಣಕ್ಕೆ ಜಗಳ – ವ್ಯಕ್ತಿಯ ಕೊಲೆ

ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರ ನಡುವೆ ಜಗಳ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ವ್ಯಕ್ತಿಯೊಬ್ಬ ಇನ್ನೊಬ್ಬನನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ತುಮಕೂರು ತಾಲ್ಲೂಕು ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹೆಬ್ಬೂರು ಹೋಬಳಿಯ ಕುಂಬಿಪಾಳ್ಯದಲ್ಲಿ ಘಟನೆ ನಡೆದಿದ್ದು ವಸಿಂ ಅಕ್ರಮ್ ಖಾನ್ ನನ್ನು ಕೊಲೆ ಮಾಡಲಾಗಿದೆ. ವಸೀಂ ಸ್ಕೂಟರ್ ಮೆಕಾನಿಕ್ ಆಗಿದ್ದ ಎಂದು ಹೇಳಲಾಗಿದೆ.

ವಸೀಂ ಮತ್ತು ಇಕ್ರಂ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ವಸೀಂ ನನ್ನು ಮರದ ತುಂಡಿನಿಂದ ಹೊಡೆದು ಹತ್ಯೆ ಮಾಡಲಾಗಿದೆ.

ಜಗಳದ ಸಂದರ್ಭದಲ್ಲಿ ವಸೀಂ ಲಾಂಗ್ ನಿಂದ ಇಕ್ರಂ ಮೇಲೆ ಹಲ್ಲೆ ನಡೆಸಿದನೆಂದು ಹೇಳಲಾಗಿದೆ. ಇದರಿಂದ ರೊಚ್ಚಿಗೆದ್ದ ಇಕ್ರಂ ಮರದ ತುಂಡಿನಿಂದ ತಲೆಗೆ ಬಲವಾಗಿ ಹೊಡೆದ ವೇಳೆ ವಸೀಂ ತಲೆಗೆ ತೀವ್ರ ಪಟ್ಟಾಗಿದೆ. ಕೂಡಲೇ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ವಸೀಂ ಮೃತಪಟ್ಟಿದ್ದಾನೆ.

ಈ ಪ್ರಕರಣದಲ್ಲಿ ಹೆಬ್ಬೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular