Sunday, September 8, 2024
Google search engine
Homeಇತರೆತುಮಕೂರು - ಕೆರೆಗೆ ಬಿದ್ದ ಕಾರು - ಒಂದೇ ಕುಟುಂಬದ ಮೂವರು ಸಾವು

ತುಮಕೂರು – ಕೆರೆಗೆ ಬಿದ್ದ ಕಾರು – ಒಂದೇ ಕುಟುಂಬದ ಮೂವರು ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂರು ಮಂದಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನಲ್ಲಿ ಸಂಭವಿಸಿದೆ.

ಶಿರಾ ತಾಲ್ಲೂಕು ವೀರಾಪುರ ಗ್ರಾಮದ ಒಂದೇ ಕುಟುಂಬದ ಸದಸ್ಯರು ವೀರಾಪುರದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಬುಕ್ಕಾಪಟ್ನದ ರಾಮಲಿಂಗಾಪುರ ಕೆರೆ ಸಮೀಪ ಬರುತ್ತಿದ್ದಂತೆಯೇ ಮಾರುತಿ ಆಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದೆ ಎಂದು ಹೇಳಲಾಗಿದೆ.

ಕಾರು ಕೆರೆಗೆ ಬಿದ್ದ ನಂತರ ಕಾರಿನಲ್ಲಿದ್ದ ಪ್ರವೀಣ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಳಿದ ದೊಡ್ಡಣ್ಣ, ಸಣ್ಣಮ್ಮ ಮತ್ತು ಯಮುನಾ ರಾಮಲಿಂಗಾಪುರ ಕೆರೆಯ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಪ್ರವೀಣ್ ಪತ್ನಿ ಯಮುನಾ, ಮಾವ ದೊಡ್ಡಣ್ಣ, ಅತ್ತೆ ಸಣ್ಣಮ್ಮ ಮೃತರಾಗಿದ್ದಾರೆ.

ಮೃತರು ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯ ವೀರಾಪುರ ಗ್ರಾಮದವರು. ಇಂದು ಬೆಳಗಿನಜಾವ ವೀರಾಪುರದಿಂದ ಧರ್ಮಸ್ಥಳಕ್ಕೆ ಹೊರಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular