Thursday, September 19, 2024
Google search engine
Homeಮುಖಪುಟಬೇಡಿಕೆಗಳಿಗೆ ಸ್ಪಂದಿಸದ ಸರ್ಕಾರ - ಮುಂದುವರೆದ ಅತಿಥಿ ಉಪನ್ಯಾಸಕರ ಧರಣಿ

ಬೇಡಿಕೆಗಳಿಗೆ ಸ್ಪಂದಿಸದ ಸರ್ಕಾರ – ಮುಂದುವರೆದ ಅತಿಥಿ ಉಪನ್ಯಾಸಕರ ಧರಣಿ

ಸೇವೆಯನ್ನು ಕಾಯಂಗೊಳಿಸುವುದೂ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಧರಣಿಯನ್ನು ಮುಂದುವರೆಸಿದ್ದಾರೆ. ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸದೇ ಇರುವ ಕಾರಣದಿಂದ ಧರಣಿಯನ್ನು ಮುಂದುವರೆಸಿದ್ದೇವೆ ಎಂದು ತುಮಕೂರು ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಧರ್ಮವೀರ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ನಡೆಸಿದ ಬೃಹತ್ ಪ್ರತಿಭಟನೆಗೆ ರಾಜ್ಯ ಸರ್ಕಾರ ಮತ್ತು ಸಚಿವರಿಂದ ಸರಿಯಾದ ರೀತಿಯ ಸ್ಪಂದನೆ ಸಿಗದ ಕಾರಣ ರಾಜ್ಯಾಧ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅತಿಥಿ ಉಪನ್ಯಾಸಕರ ಅನಿರ್ಧಿಷ್ಠಾವಧಿಯ ಧರಣಿ ಮುಂದೆವರೆದಿದೆ. ಅತಿಥಿ ಉಪನ್ಯಾಸಕರು ಯಾವುದೇ ಊಹಾಪೂಹಗಳಿಗೆ ಕಿವಿಗೊಡದೆ ಎಲ್ಲರೂ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿ ಎಂದು ಕರೆ ನೀಡಿದ್ದಾರೆ.

ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಅನಿರ್ಧಿಷ್ಠಾವದಿಯ ಧರಣಿಯಲ್ಲಿ ಮಾತನಾಡಿದ ಧರ್ಮವೀರ್ ರಾಜ್ಯಾದ್ಯಾಂತ ಎಲ್ಲಾ ಅತಿಥಿ ಉಪನ್ಯಾಸಕರು ವೇತರಹಿತವಾಗಿ ಪ್ರತಿಭಟನೆ ಮಾಡುತ್ತಿದ್ದು ಇಲಾಖೆಯ ಆಯುಕ್ತರು ಈಗಾಗಲೇ ಸಮ್ಮತಿಸಿದ್ದರೂ ಕೆಲವು ಕಾಲೇಜಿನ ಪ್ರಾಂಶುಪಾಲರು ಒತ್ತಾಯ ಪೂರ್ವಕವಾಗಿ ತರಗತಿಗಳನ್ನು ತೆಗೆದುಕೊಳ್ಳಲು ಒತ್ತಾಯಿಸುತ್ತಿದ್ದಾರೆ. ಅಂತವರ ವಿರುದ್ದ ನಮ್ಮ ಸಂಘವು ಕಾನೂನು ಹೊರಾಟಕ್ಕೂ ಮುಂದಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಅತಿಥಿ ಉಪನ್ಯಾಸಕ ಡಾ.ಶಿವಣ್ಣ ತಿಮ್ಲಾಪುರ ಮಾತನಾಡಿ, ರಾಜ್ಯ ಸರ್ಕಾರ ಹಲವು ವರ್ಷಗಳಿಂದ ನಮ್ಮ ನ್ಯಾಯ ಸಮ್ಮತ ಬೇಡಿಕೆಯನ್ನು ಈಡೇರಿಸಿಲ್ಲ. ಅತಿಥಿ ಉಪನ್ಯಾಸಕರಿಗೆ ಈ ರಾಜ್ಯದಲ್ಲಿ ಯಾವುದೇ ಸರ್ಕಾರ ನ್ಯಾಯ ದೊರಕಿಸಿಕೊಟ್ಟಿಲ್ಲ. ಧರಣಿ ಸ್ಥಳಕ್ಕೆ ಆಗವಿಸಿದ್ದ ಮಂತ್ರಿಗಳು ಸ್ವಷ್ಠವಾದ ಸಂದೇಶ ನೀಡದೇ ಅಸ್ವಷ್ಟ ಹೇಳಿಕೆ ನೀಡಿದ್ದರಿಂದ್ದ ಧರಣಿ ಮುಂದುವರೆಸುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ಅತಿಥಿ ಉಪನ್ಯಾಸಕ ಡಾ.ಮಲ್ಲಿಕಾರ್ಜನ್ ಮಾತನಾಡಿ ಬೆಳಗಾವಿ ಧರಣಿಯಲ್ಲಿ ಸಚಿವರಾದ ಎಂ.ಬಿ ಪಾಟೇಲ್, ಟಿ.ಬಿ.ಜಯಚಂದ್ರ, ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಎಲ್ಲರು ಪ್ರತಿಭಟನೆ ಸ್ಥಳಕ್ಕೆ ಬಂದು ಮಾತನಾಡಿದರೆ ಹೊರೆತು ನಮಗೆ ನ್ಯಾಯ ದೊರಕಿಕೊಡುವ ಖಚಿತವಾದ ಸಂದೇಶ ನೀಡದ ಕಾರಣ ನಮ್ಮ ಪ್ರತಿಭಟನೆ ಮುಂದುವರೆಸಲು ಕಾರಣವಾಗಿದೆ ಎಂದರು.

ಧರಣಿಯಲ್ಲಿ ಅತಿಥಿ ಉಪನ್ಯಾಸಕರಾದ ಶಿವಲಿಂಗಯ್ಯ, ಮಲ್ಲಿಕಾರ್ಜನಯ್ಯ, ಶಂಕರ ಹಾರೋಗೆರೆ, ನಟರಾಜು, ಶಶಿಧರ್, ಮಾದೇವಯ್ಯ, ವೇದಮೂರ್ತಿ, ಕಿರಣ ಕುಮಾರ್, ಜಯರಾಮು, ನಟರಾಜು, ಡಾ.ಜಾಲಜಾಕ್ಷಿ ಮುಂತಾದವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular