Monday, September 16, 2024
Google search engine
Homeಮುಖಪುಟಮೂರು ಡಿಸಿಎಂ ಮಾಡಿದರೆ ಲೋಕಸಭಾ ಚುನಾವಣೆಗೆ ಅನುಕೂಲ - ಸಹಕಾರ ಸಚಿವ ಕೆ.ಎನ್.ರಾಜಣ್ಣ

ಮೂರು ಡಿಸಿಎಂ ಮಾಡಿದರೆ ಲೋಕಸಭಾ ಚುನಾವಣೆಗೆ ಅನುಕೂಲ – ಸಹಕಾರ ಸಚಿವ ಕೆ.ಎನ್.ರಾಜಣ್ಣ

ಲೋಕಸಭಾ ಚುನಾವಣೆಯ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯದಲ್ಲಿ ಮೂರು ಡಿಸಿಎಂ ಮಾಡುವುದು ಸೂಕ್ತ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಐದು ರಾಜ್ಯಗಳ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಮೂವರು ಉಪಮುಖ್ಯಮಂತ್ರಿಗಳನ್ನು ಮಾಡಿದೆ. ಹಾಗೆಯೇ ಕರ್ನಾಟಕದಲ್ಲೂ ಮೂರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಿದರೆ ಒಳ್ಳೆಯದು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಗಮನಕ್ಕೆ ಈ ವಿಷಯವನ್ನು ತರಲಾಗಿದೆ. ಈ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಮಾಡುವುದು ಬೇಡ ಎಂದು ಹೇಳಿದೆ. ಅದರಂತೆ ಸುಮ್ಮನಿದ್ದೆ. ಈಗ ನನ್ನ ಹಿಂದಿನ ಹೇಳಿಕೆಗೆ ಬದ್ದನಾಗಿದ್ದೇನೆ. ಮೂರು ಡಿಸಿಎಂ ಹುದ್ದೆಗಳನ್ನು ಮಾಡಬೇಕು ಎಂದು ತಿಳಿಸಿದರು.

ಮೂರು ಉಪಮುಖ್ಯಮಂತ್ರಿಗಳನ್ನು ಮಾಡುವಂತೆ ಸಚಿವರಾದ ಡಾ.ಜಿ.ಪರಮೇಶ್ವರ್ ಮತ್ತು ಸತೀಶ್ ಜಾರಕಿಹೊಳಿಯವರು ಪ್ರಸ್ತಾಪ ಮಾಡಿದ್ದಾರೆ. ನಾನೂ ಕೂಡ ಅದನ್ನೇ ಹೇಳುತ್ತಿದ್ದೇನೆ. ಮೂರು ಡಿಸಿಎಂಗಳನ್ನು ಮಾಡಿದರೆ ಲೋಕಸಭಾ ಚುನಾವಣೆಯಲ್ಲಿ ಜಾತಿವಾರು ಮತಗಳು ಕಾಂಗ್ರೆಸ್ ಪಕ್ಷಕ್ಕೆ ಬರಲಿವೆ ಎಂದು ಹೇಳಿದರು.

ಸರ್ವರಿಗೂ ಸಮಪಾಲು ಸಮಬಾಳು ಅನ್ನೋದು ಕೇವಲ ಸಂಪತ್ತಿಗೆ ಮಾತ್ರ ಅಲ್ಲ. ಅವಕಾಶಗಳಿಗೂ ಕೂಡ ಹಂಚಿಕೆ ಆಗಬೇಕು. ಕಾಂಗ್ರೆಸ್ ಪರ ಯಾವ ಯಾವ ಸಮುದಾಯಗಳು ಇವೆ ಅವರನ್ನು ಡಿಸಿಎಂ ಮಾಡಬೇಕು ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular