Friday, September 20, 2024
Google search engine
Homeಮುಖಪುಟಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಮಾಜಿ ಸಚಿವ ವಿ.ಸೋಮಣ್ಣಗೆ ತುಮಕೂರು ಟಿಕೆಟ್

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಮಾಜಿ ಸಚಿವ ವಿ.ಸೋಮಣ್ಣಗೆ ತುಮಕೂರು ಟಿಕೆಟ್

ಕೇಂದ್ರದ ಹೈಕಮಾಂಡ್ ನಾಯಕರು ಒಪ್ಪಿಗೆ ಸೂಚಿಸಿದರೆ ಮಾಜಿ ಸಚಿವ ವಿ.ಸೋಮಣ್ಣ ಅವರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಮ್ಮದೇನೂ ಅಭ್ಯಂತರ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿ.ಸೋಮಣ್ಣ ಅವರು ಹಿರಿಯರಿದ್ದಾರೆ. ಪಕ್ಷ ಒಟ್ಟಾಗಿ ಕೂತು ಚರ್ಚೆ ಮಾಡಲಿದೆ. ಮೈತ್ರಿ ಹಂಚಿಕೆ ವಿಚಾರ ಸದ್ಯದಲ್ಲೇ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿ ಅಂತಮವಾಗಿ ತೀರ್ಮಾನವಾಗಲಿದೆ ಎಂದರು.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸಲು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ ನಂತರ ವರಿಷ್ಠರು ತೀಮಾನ ಮಾಡುತ್ತಾರೆ. ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಸೋಮಣ್ಣ ಸ್ಪರ್ಧಿಸುವ ವಿಚಾರವೂ ಸಹ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ನಂತರ ತೀರ್ಮಾನ ಮಾಡಲಾಗುತ್ತದೆ ಎಂದು ಹೇಳಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 28 ಕ್ಷೇತ್ರಗಳನ್ನು ಗೆಲ್ಲುವುದು ಖಚಿತ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ತಿಳಿಸಿದರು.

ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಶಕ್ತಿ ವಂದನಾ ಅಭಿಯಾನ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕಳೆದ ಒಂದು ವಾರದಿಂದ ರಾಯಚೂರು, ಯಾದಗಿರಿ, ಮಂಗಳೂರು, ಚಿಕ್ಕಮಗಳೂರು, ಹಾವೇರಿ, ಹುಬ್ಬಳ್ಳಿ ಪ್ರವಾಸ ಮುಗಿಸಿಕೊಂಡು ತುಮಕೂರಿಗೆ ಆಗಮಿಸಿದ್ದೇನೆ. ಮುಂಬರುವ ಲೋಕಸಭಾ ಚುನಾವಣೆ ಗೆಲುವಿಗೆ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular