Saturday, March 14, 2026
Google search engine
Homeಜಿಲ್ಲೆವಾರ್ನಿಂಗ್ ಕೊಡುತ್ತಲೇ ಸೋಮಣ್ಣ ಪರ ಬ್ಯಾಟ್ ಬೀಸಿದ ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್

ವಾರ್ನಿಂಗ್ ಕೊಡುತ್ತಲೇ ಸೋಮಣ್ಣ ಪರ ಬ್ಯಾಟ್ ಬೀಸಿದ ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್

ತುಮಕೂರು ಲೋಕಸಭಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದು ಹೇಳಿಕೆ ನೀಡುವವರಿಗೆ ಬಿಜೆಪಿ ತುಮಕೂರು ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್ ವಾರ್ನಿಂಗ್ ನೀಡಿದ್ದಾರೆ. ಯಾರೂ ಕೂಡ ಮನಬಂದಂತೆ ಹೇಳಿಕೆ ಕೊಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ನಾನೂ ಕೂಡ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂದು ಹೇಳಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಿಂದ ಯಾರ ಹೆಸರಿನ ಪಟ್ಟಿಯನ್ನು ಪ್ರತ್ಯೇಕವಾಗಿ ಹೈಕಮಾಂಡ್ ಗೆ ಕಳಿಸಿಲ್ಲ. ಆಕಾಂಕ್ಷಿಗಳು ತಪ್ಪು ಮಾಹಿತಿಗಳನ್ನು ಮಾಧ್ಯಮಕ್ಕೆ ಕೊಡಬಾರದು ಎಂದು ತಾಕೀತು ಮಾಡಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರಕ್ಕೆ ನಾನು ಕೂಡ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಹಾಗೆಂದು ಪಕ್ಷದ ಚೌಕಟ್ಟು ಬಿಟ್ಟು ಹೇಳಿಕೆ ಕೊಡುವುದಿಲ್ಲ ಎಂದು ತಿಳಿಸಿದ್ದಾರೆ.

ಮಾಜಿ ಸಚಿವ ವಿ.ಸೋಮಣ್ಣ ಅವರಿಗೆ ಟಿಕೆಟ್ ಕೊಡದಂತೆ ಯಾರೂ ಹೈಕಮಾಂಡ್ ಗೆ ಪತ್ರ ಬರೆದಿಲ್ಲ. ಹೈಕಮಾಂಡ್ ಸೋಮಣ್ಣ ಅವರಿಗೆ ಟಿಕೆಟ್ ಕೊಟ್ಟರೆ ಕಮಲದ ಚಿಹ್ನೆಗಾಗಿ ಕೆಲಸ ಮಾಡುತ್ತೇವೆ ಎಂದು ಸೋಮಣ್ಣ ಪರ ಬ್ಯಾಟಿಂಗ್ ಬೀಸಿದ್ದಾರೆ.

ಸಂಸದ ಜಿ.ಎಸ್.ಬಸವರಾಜು ಅವರ ಬಳಿಕ ಬಿಜೆಪಿ ತುಮಕೂರು ಘಟಕದ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್ ಅವರು ವಿ.ಸೋಮಣ್ಣ ಅವರ ಬೆನ್ನಿಗೆ ನಿಂತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular