Friday, October 18, 2024
Google search engine
Homeಮುಖಪುಟತೀವ್ರ ಕುತೂಹಲ ಕೆರಳಿಸಿದ ಜೆ.ಸಿ.ಮಾಧುಸ್ವಾಮಿ-ಎಸ್.ಪಿ.ಮುದ್ದಹನುಮೇಗೌಡ ಭೇಟಿ

ತೀವ್ರ ಕುತೂಹಲ ಕೆರಳಿಸಿದ ಜೆ.ಸಿ.ಮಾಧುಸ್ವಾಮಿ-ಎಸ್.ಪಿ.ಮುದ್ದಹನುಮೇಗೌಡ ಭೇಟಿ

ಚುನಾವಣಾ ಪ್ರಚಾರದ ಕಾವು ಜೋರಾಗುತ್ತಿರುವ ನಡುವೆಯೇ ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಅವರು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಜೆ.ಸಿ.ಮಾಧುಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ತೀವ್ರ ಕುತೂಹಲವನ್ನು ಮೂಡಿಸಿದೆ.

ಲೋಕಸಭಾ ಟಿಕೆಟ್ ಕೈತಪ್ಪಿದ್ದರಿಂದ ಮುನಿಸಿಕೊಂಡಿರುವ ಜೆ.ಸಿ.ಮಾಧುಸ್ವಾಮಿ ಪಕ್ಷದ ಅಭ್ಯರ್ಥಿ ವಿ.ಸೋಮಣ್ಣ ಅವರನ್ನು ಭೇಟಿ ಮಾಡಲು ನಿರಾಕರಿಸಿದ್ದಾರೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಿಕ್ಕನಾಯಕನಹಳ್ಳಿಯ ಮನೆಗೆ ಭೇಟಿ ನೀಡಿ ಜೆ.ಸಿ.ಮಾಧುಸ್ವಾಮಿ ಅವರ ಜೊತೆ ಮಾತುಕತೆ ನಡೆಸಿದ್ದರೂ ಅವರ ಮುನಿಸು ತಣ್ಣಗಾಗಿಲ್ಲ.

ಏಪ್ರಿಲ್ 5 ರಂದು ವಿ.ಸೋಮಣ್ಣ ಅವರು ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಪ್ರಚಾರ ನಡೆಸಿದರೂ ಜೆ.ಸಿ.ಮಾಧುಸ್ವಾಮಿ ಅವರನ್ನು ಭೇಟಿ ಮಾಡಿಲ್ಲ. ಹಾಗೆಯೇ ಜೆ.ಸಿ.ಮಾಧುಸ್ವಾಮಿ ಮತ್ತು ಅವರ ಬೆಂಬಲಿಗರೂ ಕೂಡ ಸೋಮಣ್ಣ ಅವರ ಜೊತೆಗೆ ಪ್ರಚಾರಕ್ಕೆ ಹೋಗಿಲ್ಲದಿರುವುದು ಸೋಮಣ್ಣ ಅವರನ್ನು ಇನ್ನಿಲ್ಲದಂತೆ ಕಾಡುತ್ತಿದೆ.

ಇವೆಲ್ಲದರ ನಡುವೆಯೇ ಏಪ್ರಿಲ್ 7ರಂದು ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಅವರು ಚಿಕ್ಕನಾಯಕನಹಳ್ಳಿಗೆ ಪ್ರಚಾರಕ್ಕೆ ತೆರಳಿದಾಗ ಜೆ.ಸಿ.ಮಾಧುಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಮುದ್ದಹನುಮೇಗೌಡರು ಪುಷ್ಪಗುಚ್ಚವನ್ನು ನೀಡಿ ಮಾಧುಸ್ವಾಮಿ ಅವರನ್ನು ಅಭಿನಂದಿಸಿದರು ಇದು ಈಗ ಜಿಲ್ಲಾ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ವಿ.ಸೋಮಣ್ಣ ಅವರು ಮಾಧುಸ್ವಾಮಿ ಅವರನ್ನು ಭೇಟಿ ಮಾಡಲು ಹೋದಾಗ ಸ್ವಲ್ಪ ಹೊತ್ತು ಮನೆಯ ಹೊರಗೆ ನಿಲ್ಲಿಸಿ ಮಾತನಾಡಿ ಆನಂತರ ಮನೆಯ ಒಳಗೆ ಕರೆದಿರುವುದು ಹಾಗೆಯೇ ಎಸ್.ಪಿ.ಮುದ್ದಹನುಮೇಗೌಡರನ್ನು ಮನೆಯ ಒಳಗೆ ಪುಷ್ಪಗುಚ್ಚ ನೀಡಿ ಸ್ವಾಗತಿಸಿರುವುದು ಕುತೂಹಲ ಮೂಡಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular