Sunday, September 8, 2024
Google search engine
Homeಮುಖಪುಟಬಿಜೆಪಿ ಸೋಲಿಸಿ, ಕಾಂಗ್ರೆಸ್ ಗೆಲ್ಲಿಸಿ - ದಲಿತ ಹೋರಾಟಗಾರರು

ಬಿಜೆಪಿ ಸೋಲಿಸಿ, ಕಾಂಗ್ರೆಸ್ ಗೆಲ್ಲಿಸಿ – ದಲಿತ ಹೋರಾಟಗಾರರು

ದೇಶದ ಶೋಷಿತರು, ಬಡವರು, ದಲಿತರ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ವಿಫಲವಾಗಿರುವ ಬಿಜೆಪಿಯನ್ನು ಸೋಲಿಸಿ, ಸಾಮಾಜಿಕ ನ್ಯಾಯಕ್ಕೆ ಬದ್ದವಾಗಿರುವ ಕಾಂಗ್ರೆಸ್ ಪಕ್ಷವನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸುವಂತೆ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಗಳ ಸಂಚಾಲಕ ಎಂ.ವೆಂಕಟೇಶ್ ಕರೆ ನೀಡಿದ್ದಾರೆ
.
ತುಮಕೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನ ವಿರೋಧಿಗಳಿಂದ ಬಡವರ ಪರವಾಗಿರುವ ಸಂವಿಧಾನವನ್ನು ಉಳಿಸುವ ನಿಟ್ಟಿನಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ಇನ್ನಿತರ ದಲಿತ ಸಂಘಟನೆಗಳು ಸೇರಿ ಐಕ್ಯ ಹೋರಾಟ ಸಮಿತಿ ರಚಿಸಿಕೊಂಡು, ಎದ್ದೇಳು ಕರ್ನಾಟಕ ಸಂಘಟನೆಯ ಸಹಕಾರದಲ್ಲಿ ರಾಜ್ಯದಾದ್ಯಂತ ಪ್ರವಾಸ ಮಾಡಿ, ದಲಿತ ಸಮುದಾಯಗಳ ಮುಖಂಡರು, ಮತದಾರರಿಗೆ ರಾಜಕೀಯ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ದಲಿತರು ಸೇರಿದಂತೆ ದೇಶದ ಹಿಂದುಳಿದ ಸಮುದಾಯಗಳ ಏಳಿಗೆಗೆ ಬೆನ್ನೆಲುಬಾಗಿರುವ ಮೀಸಲಾತಿಯನ್ನು ಹೇಗಾದರೂ ಮಾಡಿ ರದ್ದುಪಡಿಸಬೇಕು ಎಂಬುದು ಬಿಜೆಪಿಯ ಹುನ್ನಾರವಾಗಿದೆ. ಹಾಗಾಗಿಯೇ ಅಧಿಕಾರಕ್ಕೆ ಬಂದ ಹತ್ತು ವರ್ಷಗಳಲ್ಲಿ ದಲಿತರು, ಹಿಂದುಳಿದ ವರ್ಗಗಳ ವಿದ್ಯಾವಂತರಿಗೆ ಆಸರೆಯಾಗಿದ್ದ ಸಾರ್ವಜನಿಕ ಸಂಸ್ಥೆಗಳನ್ನು ಬಂಡವಾಳ ಹಿಂಪಡೆಯುವ ನೆಪದಲ್ಲಿ ಖಾಸಗಿಯವರಿಗೆ ಮಾರಾಟ ಮಾಡಿದ ಪರಿಣಾಮ, ಮೀಸಲಾತಿ ಇಲ್ಲದಾಗಿದೆ. ಇದರ ಜೊತೆಗೆ, ಸಾಮಾಜಿಕ ನ್ಯಾಯ, ಅಭಿವ್ಯಕ್ತಿ ಸ್ವಾತಂತ್ರಕ್ಕೆ ಅವಕಾಶವೇ ಇಲ್ಲದಂತಾಗಿದೆ ಎಂದು ಆರೋಪಿಸಿದರು.

ಸರ್ಕಾರದ ನೀತಿಗಳನ್ನು ಪ್ರಶ್ನಿಸುವ ಪತ್ರಕರ್ತರು, ಬುದ್ದಿಜೀವಿಗಳ ಮೇಲೆ ಯುಎಪಿಎ ಕೇಸು ಹಾಕಿ ೨-೩ ವರ್ಷಗಳ ಕಾಲ ವಿಚಾರಣೆ ಇಲ್ಲದೆ ಜೈಲುಗಳಲ್ಲಿ ಕೊಳೆಯುವಂತೆ ಬಿಜೆಪಿ ಸರ್ಕಾರ ಮಾಡಿದೆ. ಉತ್ತರಪ್ರದೇಶದ ಸರ್ಕಾರ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ರೊಟ್ಟಿಯ ಜೊತೆಗೆ, ನೆಂಚಿಕೊಳ್ಳಲು ಉಪ್ಪು ನೀಡುತ್ತಿದೆ ಎಂದು ಸುದ್ದಿ ಮಾಡಿದ ಪತ್ರಕರ್ತನ ಮೇಲೆ ಕೇಸು ಹಾಕಿ ಜೈಲಿಗೆ ಕಳುಹಿಸಲಾಗಿದೆ. ಸತ್ಯವನ್ನು ಹೇಳಲಾಗದ ಭಯದ ವಾತಾವರಣದಲ್ಲಿ ಜನರು ಬದುಕುತ್ತಿದ್ದಾರೆ. ಹಾಗಾಗಿ ಸಂವಿಧಾನ, ಅಭಿವ್ಯಕ್ತಿ ಸ್ವಾತಂತ್ರ ಉಳಿಯಲು ಬಿಜೆಪಿಯನ್ನು ಸೋಲಿಸುವಂತೆ ಕರೆ ನೀಡಲಾಗುತ್ತಿದೆ ಎಂದು ಎಂ.ವೆAಕಟೇಶ್ ತಿಳಿಸಿದರು.

ಎದ್ದೇಳು ಕರ್ನಾಟಕ ಸಂಘಟನೆಯ ಡಾ.ಪಾವನ ಮಾತನಾಡಿ, ದೇಶದಲ್ಲಿ ಮಾಧ್ಯಮ ಸ್ವಾತಂತ್ರವೇ ಇಲ್ಲದಾಗಿದೆ. ಐಟಿ, ಈಡಿ, ಸಿಬಿಐ ಮೂಲಕ ವಿರೋಧ ಪಕ್ಷಗಳನ್ನು ಹೆದರಿಸಿ, ಪ್ರಜಾಪ್ರಭುತ್ವವನ್ನು ದಮನಗೊಳಿಸುವ ಕೆಲಸ ಭರದಿಂದ ಸಾಗಿದೆ. ಇದು ಹೋಗಬೇಕೆಂದರೆ ಬಿಜೆಪಿ ಸೋಲಬೇಕು. ಹಾಗಾಗಿ ಪರ್ಯಾಯ ಪಕ್ಷವಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಹೋರಾಟಗಾರರು ಜನರಲ್ಲಿ ಮನವಿ ಮಾಡುತ್ತಿರುವುದಾಗಿ ತಿಳಿಸಿದರು.

ಹಿರಿಯ ಚಿಂತಕ ದೊರೆರಾಜು ಮಾತನಾಡಿ, ದೇಶದಲ್ಲಿ ಚಳವಳಿಗಾರರ ದ್ವನಿ ಅಡಗಿಸುವ ಕೆಲಸ ನಡೆಯುತ್ತಿದೆ. ವಿಚಾರವಾದಿಗಳಾದ ಆನಂದ ತಲ್ತುಂಬೆ ಅವರನ್ನು ಕಾರಣವಿಲ್ಲದೆ ಎರಡು ವರ್ಷಗಳ ಕಾಲ ಜೈಲಿಗಟ್ಟಿದರು. ಇಂತಹ ಸರ್ವಾಧಿಕಾರಿ ಆಡಳಿತ ತೊಲಗಬೇಕು ಎಂಬ ಉದ್ದೇಶದಿಂದ ಬಿಜೆಪಿ ಸೋಲಿಸಿ, ಕಾಂಗ್ರೆಸ್ ಗೆಲ್ಲಿಸಿ ಅಭಿಯಾನವನ್ನು ದಲಿತ ಹೋರಾಟಗಾರರು ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಗೋಷ್ಠಿಯಲ್ಲಿ ಸಮಾಜ ಸೇವಕ ತಾಜುದ್ದೀನ್, ದಲಿತ ಸಂಘರ್ಷ ಸಮಿತಿ ಮುಖಂಡರಾದ ನರಸಿಂಹಯ್ಯ, ಐಕ್ಯ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಡಾ.ಮುರುಳೀಧರ್, ಬೆನ್ನಿಗಾನಹಳ್ಳಿ ರಾಮಚಂದ್ರ, ಹೆಚ್.ಮುನಿವೆಂಕಟಪ್ಪ, ಗಂಗಾಧರ್, ಕೇಬಲ್ ರಘು ಸೇರಿದಂತೆ ಹಲವರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular