Friday, October 18, 2024
Google search engine
Homeಮುಖಪುಟನಿರ್ದೇಶಕ, ನಿರ್ಮಾಪಕ ಸದಾನಂದ ಸುವರ್ಣ ನಿಧನ

ನಿರ್ದೇಶಕ, ನಿರ್ಮಾಪಕ ಸದಾನಂದ ಸುವರ್ಣ ನಿಧನ

ಕನ್ನಡದ ಹಿರಿಯ ನಿರ್ದೇಶಕ, ನಿರ್ಮಾಪಕ ಸದಾನಂದ ಸುವರ್ಣ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.

ಸದಾನಂದ ಸುವರ್ಣ ಅವರು ದೂರದರ್ಶನಕ್ಕೆ ಗುಡ್ಡದ ಭೂತ ಸೀರಿಯಲ್ ನಿರ್ದೇಶನ ಮಾಡಿದ್ದರು. ಅವರೇ ಈ ಸೀರಿಯಲ್ ನ ನಿರ್ಮಾಪಕರಾಗಿದ್ದರು. ಈ ಸೀರಿಯಲ್ ನಲ್ಲಿ ಪ್ರಕಾಶ್ ರೈ ಅಭಿನಯಿಸಿದ್ದರು.

ಸದಾನಂದ ಸುವರ್ಣ ಅವರು ಗಿರೀಶ್ ಕಾಸರವಳ್ಳಿ ಅವರ ನಿರ್ದೇಶನದ ಘಟಶ್ರಾದ್ಧ ಚಿತ್ರವನ್ನು ನಿರ್ಮಾಣ ಮಾಡಿದ್ದರು.

ಮುಖ್ಯಮಂತ್ರಿ ಸಂತಾಪ

ಹಿರಿಯ ರಂಗಕರ್ಮಿ, ಚಲನಚಿತ್ರ ನಿರ್ದೇಶಕ- ನಿರ್ಮಾಪಕ ಸದಾನಂದ ಸುವರ್ಣರ ನಿಧನದ ಸುದ್ದಿ ಕೇಳಿ ದು:ಖವಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಸದಾನಂದ ಸುವರ್ಣರು ನಿರ್ಮಿಸಿದ್ದ ‘‘ಘಟಶ್ರಾದ್ಧ’’ ಚಿತ್ರ ಮತ್ತು ನಿರ್ದೇಶಿಸಿದ್ದ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ‘’ಕುಬಿ ಮತ್ತು ಇಯಾಲ’’ ಕತೆಯನ್ನಾಧರಿಸಿದ ಚಿತ್ರಗಳೆರಡೂ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿಗಳಿಗೆ ಭಾಜನವಾಗಿವೆ ಎಂದು ಸ್ಮರಿಸಿದ್ದಾರೆ.

ನೂರಾರು ಕನ್ನಡ ಮತ್ತು ತುಳು ನಾಟಕಗಳನ್ನು ನಿರ್ದೇಶಿಸಿದ್ದ ಸುವರ್ಣರ ರಂಗಗರಡಿಯಿಂದ ಬಂದಿರುವ ಹಲವಾರು ಪ್ರತಿಭಾವಂತ ನಟ-ನಟಿಯರು ಕಲಾಜಗತ್ತಿನಲ್ಲಿ ಬದುಕು ಕಟ್ಟಿಕೊಂಡಿದ್ದಾರೆ ಎಂದು ಬಣ್ಣಿಸಿದ್ದಾರೆ.

ಸದಾನಂದ ಸುವರ್ಣರನ್ನು ಕಳೆದುಕೊಂಡಿರುವ ಅವರ ಶಿಷ್ಯವರ್ಗ ಮತ್ತು ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular