Monday, September 16, 2024
Google search engine
Homeಮುಖಪುಟರಾಜ್ಯ ಮಟ್ಟದ ಮುಂಗಾರು ಕವಿಗೋಷ್ಠಿ

ರಾಜ್ಯ ಮಟ್ಟದ ಮುಂಗಾರು ಕವಿಗೋಷ್ಠಿ

ಬಹುಮುಖಿ ಗೆಳೆಯರ ಬಳಗ, ತುಮಕೂರು, ಅಪೂರ್ವ ಪ್ರಕಾಶನದ ವತಿಯಿಂದ ಆಗಸ್ಟ್ 4ರಂದು ಬೆಳಗ್ಗೆ 10.30ಕ್ಕೆ ತುಮಕೂರಿನ ಕನ್ನಡ ಭವನದಲ್ಲಿ ಅಪ್ಪ ಪ್ರಶಸ್ತಿ ಪ್ರದಾನ ಮತ್ತು ರಾಜ್ಯ ಮಟ್ಟದ ಮುಂಗಾರು ಕವಿಗೋಷ್ಠಿಯನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಶಾಸಕ ಎಸ್.ಜಿ.ನಂಜಯ್ಯ ಉದ್ಘಾಟಿಸಲಿದ್ದು, ಹಿರಿಯ ಸಾಹಿತಿ, ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ಪ್ರಶಸ್ತಿ ಪ್ರದಾನ ಮಾಡುವರು. ಬಹುಮುಖಿ ಗೆಳೆಯರ ಬಳಗದ ಸಂಚಾಲಕ ಟಿ.ಸತೀಶ್ ಜವರೇಗೌಡ ಅಧ್ಯಕ್ಷತೆ ವಹಿಸುವರು.

ಬಹುಮುಖಿ ಗೆಳೆಯರ ಬಳಗದ ಸಂಸ್ಥಾಪಕ ಸಂಚಾಲಕ ಹಡವನಹಳ್ಳಿ ವೀರಣ್ಣಗೌಡ ಪ್ರಾಸ್ತಾವಿಕ ಮಾತನಾಡುವರು. ಮುಖ್ಯ ಅತಿಥಿಗಳಾಗಿ ಲೇಖಕಿ ಬಾ.ಹ.ರಮಾಕುಮಾರಿ, ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ಮೈಸೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಅಶೋಕ್ ಕುಮಾರ್, ಹಿರಿಯ ಲೇಖಕ ಡಾ. ಅಮ್ಮಸಂದ್ರ ಸುರೇಶ್ ಮತ್ತು ಪತ್ರಕರ್ತ ಸಾ.ಚಿ.ರಾಜಕುಮಾರ್ ಭಾಗವಹಿಸುವರು.

ನೆಲದಾಯ ಪರಿಮಳ ಕೃತಿಯ ಕರ್ತೃ ಸ್ಮಿತಾ ಅಮೃತರಾಜ್, ಲೇಖಕ ಡಾ.ಟಿ.ವೆಂಕಟೇಶಮೂರ್ತಿ, ಮಲ್ಲಿಕಾರ್ಜುನ ಶೆಲ್ಲಿಕೇರಿ, ಗುರುಪ್ರಸಾದ್ ಕಂಟಲಗೆರೆ ಅವರಿಗೆ ಅಪ್ಪ ಪ್ರಶಸ್ತಿ ಪ್ರದಾನ ಮಾಡಲಾಗುವುದು ಬಹುಮುಖಿ ಗೆಳೆಯರ ಬಳಗದ ಸಂಸ್ಥಾಪಕ ಸಂಚಾಲಕ ಹಡವನಹಳ್ಳಿ ವೀರಣ್ಣಗೌಡ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular