Monday, September 16, 2024
Google search engine
Homeಮುಖಪುಟಮಧುಗಿರಿ-ಚಿರತೆ ದಾಳಿಯಿಂದ ಇಬ್ಬರಿಗೆ ಗಾಯ

ಮಧುಗಿರಿ-ಚಿರತೆ ದಾಳಿಯಿಂದ ಇಬ್ಬರಿಗೆ ಗಾಯ

ಚಿರತೆ ದಾಳಿ ಮಾಡಿ ಇಬ್ಬರನ್ನು ಗಾಯಗೊಳಿಸುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿ ವೀರಣ್ಣನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರಾಮಕೃಷ್ಣಪ್ಪ ಮತ್ತು ಶಿವಣ್ಣ ರಾತ್ರಿ ಊಟ ಮುಗಿಸಿ ಬಹಿರ್ದೆಸೆಗೆಂದು ಮನೆಯಿಂದ ಹೊರ ಬಂದಾಗ ಚಿರತೆ ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಇಬ್ಬರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದಾಳಿಯ ವೇಳೆ ಕೂಗಿಕೊಂಡಿದ್ದರಿಂದ ಚಿರತೆ ಪರಾರಿಯಾಗಿದ್ದು ಗಾಯಾಳುಗಳನ್ನು ರಕ್ಷಣೆ ಮಾಡಿ, ತುಮಕೂರಿನ ಸಿದ್ದಾರ್ಥ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.
ಚಿರತೆ ಮನುಷ್ಯರ ಮೇಲೆ ದಾಳಿ ನಡೆಸಿರುವುದು ಸ್ಥಳೀಯ ಗ್ರಾಮಸ್ಥರಲ್ಲಿ ಆತಂಕವನ್ನು ಉಂಟು ಮಾಡಿದ್ದು, ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಹಿಡಿಯಬೇಕೆಂದು ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ನವೀನ್ ಗೌಡ ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular