Monday, September 16, 2024
Google search engine
Homeಮುಖಪುಟಚನ್ನಪಟ್ಟಣ ಉಪಚುನಾವಣೆ-ಎನ್.ಡಿ.ಎ ಅಭ್ಯರ್ಥಿ ಫೈನಲ್

ಚನ್ನಪಟ್ಟಣ ಉಪಚುನಾವಣೆ-ಎನ್.ಡಿ.ಎ ಅಭ್ಯರ್ಥಿ ಫೈನಲ್

ರಾಜ್ಯದ ಜನತೆ ಜೆಡಿಎಸ್-ಬಿಜೆಪಿ ಮೈತ್ರಿಯನ್ನು ಒಪ್ಪಿದ್ದಾರೆ. ಟಿಕೆಟ್ ವಿಚಾರದಲ್ಲಿ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳುತ್ತಾರೆ. ಈ ವಿಚಾರದಲ್ಲಿ ಚರ್ಚೆಗಳು ಆಗಬೇಕಾಗುತ್ತೆ. ಆಗ ಫಲಿತಾಂಶ ನಮ್ಮ ಪರ ಬರಲು ಸಾಧ್ಯ ಎಂದು ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂತಿಮವಾಗಿ ಚನ್ನಪಟ್ಟಣ ಕ್ಷೇತ್ರದಲ್ಲಿ NDA ಅಭ್ಯರ್ಥಿಯಾಗಿರುತ್ತಾರೆ.
ಜೆಡಿಎಸ್ ಬಿಜೆಪಿ ಚರ್ಚೆಯಿಲ್ಲ. ನಾವು ಒಟ್ಟಾಗಿದ್ದೇವೆ, ಹಾಗಾಗಿ ಕ್ಷೇತ್ರದಲ್ಲಿ ಎನ್ ಡಿಎ ಅಭ್ಯರ್ಥಿ ಕಣದಲ್ಲಿ ಇರಲಿದ್ದಾರೆ ಎಂದರು.

ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಜೆಡಿಎಸ್ ಗೆ ಹುಮ್ಮಸ್ಸು ಬಂದಿದೆ. ರಾಜ್ಯದ ಜನತೆ ಬಿಜೆಪಿ-ಜೆಡಿಎಸ್ ಮೈತ್ರಿ ಒಪ್ಪಿದ್ದಾರೆ. ಹೆಚ್ಚು ಸಂಸದರನ್ನು ಆಯ್ಕೆ ಮಾಡಿ ಪ್ರಧಾನಿ ಮೋದಿ ಅವರಿಗೆ ಕೊಡುಗೆ ನೀಡಿದ್ದಾರೆ. ಸ್ಥಳೀಯ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ನಾವು ಒಟ್ಟಾಗಿ ಹೋಗುತ್ತೇವೆ ಎಂದರು.

ಕಾನೂನುಗಿಂತ ಯಾರು ದೊಡ್ಡವರಲ್ಲ.

ರೇಣುಕಾಸ್ವಾಮಿ ಕೊಲೆ ಪ್ರಕರಣ ವಿಚಾರವಾಗಿ ಮಾತನಾಡಿದ ಅವರು ಕಾನೂನಿಗೆ ಎಲ್ಲರೂ ಕೂಡ ತಲೆಬಾಗಬೇಕು. ಕಾನೂನಿಗಿಂತ ಯಾರು ದೊಡ್ಡವರಿಲ್ಲ ಎಂದರು..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular