ರಸ್ತೆ ಬದಿಯಲ್ಲಿ ಬರುತ್ತಿದ್ದ ವಿದ್ಯಾರ್ಥಿನಿ ಹಾಗೂ ತಾಯಿ ಮೇಲೆ ಗಾರ್ಮೆಂಟ್ಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಇತರೆ ಮೂರು ಜನ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ತಿಪಟೂರು ತಾಲ್ಲೂಕಿನ ಹುಚ್ಚನಹಟ್ಟಿ ರಾಮಶೆಟ್ಟಿಹಟ್ಟಿ ಬಳಿಯ ರಾಷ್ಠಿಯ ಹೆದ್ದಾರಿಯ ಬೈಪಾಸ್ ಬಳಿ ಈ ಘಟನೆ ನಡೆದಿದೆ. ಮೃತರನ್ನು ರಾಮಶೆಟ್ಟಿಹಳ್ಳಿ ಗ್ರಾಮದ 45 ವರ್ಷದ ಕಮಲಮ್ಮ, ಹಳೇಪಾಳ್ಯ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವೀಣಾ ಎಂದು ಗುರುತಿಸಲಾಗಿದೆ.
ಗಾಯಗೊಂಡ ಮುದ್ದಯ್ಯ ಹಾಗೂ ಇತರರನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಮುದ್ದಯ್ಯ ಹಾಸನ ಸಾರ್ವಜನಿಕ ಆಸ್ವತ್ರಗೆ ಕಳುಹಿಸಿಕೊಡಲಾಯಿತು.
ಪ್ರತಿ ನಿತ್ಯ ಈ ಬಾರಿ ಅಪಘಾತಗಳು ನಡೆಯುತ್ತಿದ್ದನ್ನು ಖಂಡಿಸಿ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಮೃತ ದೇಹವನ್ನು ತೆಗೆಯಲು ಬಿಡುವುದಿಲ್ಲ ಎಂದು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿಯ ಇಂಜಿನಿಯರ್, ಉಪವಿಭಾಗಧಿಕಾರಿ ಸಪ್ತಶ್ರೀ, ಡಿವೈಎಸ್ಪಿ ವಿನಾಯಕ್ ಶೆಟಗೇರಿ, ತಾಲ್ಲೂಕು ದಂಡಾಧಿಕಾರಿ ಪವನ್ಕುಮಾರ್, ಬಿಇಒ ಚಂದ್ರಯ್ಯ ಭೇಟಿ ನೀಡಿ ತದನಂತರ ಸಾರ್ವಜನಿಕರಿಗೆ ಸೂಕ್ತ ವ್ಯವಸ್ಥೆ ಕಲ್ಲಿಸಲಾಗುವುದು ಎಂದು ಚರ್ಚಿಸಿದಾಗ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾರ್ವಜನಿಕ ಆಸ್ವತ್ರೆಗೆ ಕಳುಹಿಸಿಕೊಡಲಾಯಿತು. ಈ ಪ್ರಕರಣವು ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.