Thursday, October 17, 2024
Google search engine
Homeಮುಖಪುಟನಾನು ರಾಜಿನಾಮೆ ಕೊಡೋಲ್ಲ-ಸಿಎಂ ಸಿದ್ದರಾಮಯ್ಯ

ನಾನು ರಾಜಿನಾಮೆ ಕೊಡೋಲ್ಲ-ಸಿಎಂ ಸಿದ್ದರಾಮಯ್ಯ

ನಾನು ತಪ್ಪು ಮಾಡಿಲ್ಲ. ಹಾಗಾಗಿ ನಾನು ರಾಜಿನಾಮೆ ಕೊಡೋಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನ ವಿಧಾನಸೌಧದ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ನಾನೇನು ತಪ್ಪು ಮಾಡಿಲ್ಲ. ಹಾಗಾಗಿ ರಾಜಿನಾಮೆ ಕೊಡುವ ಅಗತ್ಯ ಬರುವುದಿಲ್ಲ ಎಂದು ಹೇಳಿದರು.

ಗೋದ್ರಾ ಹತ್ಯಾಕಾಂಡದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದರು. ಆಗ ನರೇಂದ್ರ ಮೋದಿಯವರು ರಾಜಿನಾಮೆ ಕೊಟ್ಟಿದ್ದರೇ? ಎಂದು ಮಾಧ್ಯಮ ಪ್ರತಿನಿಧಿಗಳನ್ನು ಪ್ರಶ್ನಿಸಿದರು.

ಎಚ್.ಡಿ.ಕುಮಾರಸ್ವಾಮಿ ರಾಜಿನಾಮೆ ನೀಡಿದ್ದಾರೆಯೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತಪ್ಪು ಮಾಡಿದ ಅವರೇ ರಾಜಿನಾಮೆ ಕೊಟ್ಟಿಲ್ಲ. ತಪ್ಪೇ ಮಾಡದ ನಾನು ರಾಜಿನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕುಮಾರಸ್ವಾಮಿ, ನರೇಂದ್ರ ಮೋದಿ ಅವರಿಗೆ ಅವರಿಗೆ ಮುಜುಗರ ಆಗುವುದಿಲ್ಲವೇ ಎಂದು ಪ್ರಶ್ನೆ ಮಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular