Thursday, January 29, 2026
Google search engine
Homeಮುಖಪುಟರಾಯಚೂರು ಜಿಲ್ಲೆಯ ಮಲಿಯಾಬಾದ್ ನಲ್ಲಿ ಅಪ್ರಕಟಿತ ಕನ್ನಡ ಶಿಲಾ ಶಾಸನ ಪತ್ತೆ-ಕೊಟ್ರೇಶ್

ರಾಯಚೂರು ಜಿಲ್ಲೆಯ ಮಲಿಯಾಬಾದ್ ನಲ್ಲಿ ಅಪ್ರಕಟಿತ ಕನ್ನಡ ಶಿಲಾ ಶಾಸನ ಪತ್ತೆ-ಕೊಟ್ರೇಶ್

ಕರ್ನಾಟಕ ರಾಜ್ಯದ ರಾಯಚೂರು ಜಿಲ್ಲೆಯ ಮಲಿಯಾಬಾದ್ ಪ್ರದೇಶದಲ್ಲಿ ಕನ್ನಡದ ಅರಸ ಅಮೋಘವರ್ಷನ ಪ್ರಮುಖ ಶಿಲಾ ಶಾಸನವೊಂದು ಪತ್ತೆಯಾಗಿದೆ. ತುಮಕೂರು ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಎಂ.ಕೊಟ್ರೇಶ್ ಅವರು ಕ್ಷೇತ್ರಕಾರ್ಯ ಮಾಡುವ ಸಂದರ್ಭದಲ್ಲಿ ಈ ಶಾಸನವು ಪತ್ತೆಯಾಗಿದೆ.

ಆ ಪ್ರದೇಶದ ಗೋಶಾಲೆಯಲ್ಲಿ ಕೆಲಸ ಮಾಡುವ ರಾಜಸ್ಥಾನದ ಮುರಳಿ ಅವರು ಮಲಿಯಾಬಾದ್ ಕೋಟೆಯ ಆವರಣದಲ್ಲಿ ಮುಳ್ಳು ಕಂಟಿಗಳನ್ನು ಸ್ವಚ್ಛಗೊಳಿಸುವಾಗ ಈ ಶಾಸನವು ಕಂಡುಬಂದಿದೆ. ಸಂಶೋಧನೆಯಿಂದ ಶಾಸನದ ವಿವರಗಳು ಬೆಳಕಿಗೆ ಬಂದಿವೆ ಎಂದು ಪ್ರೊ.ಎಂ.ಕೊಟ್ರೇಶ್ ತಿಳಿಸಿದ್ದಾರೆ.

ಈ ಶಾಸನವು ರಾಷ್ಟçಕೂಟರ ಅರಸ ಅಮೋಘವರ್ಷನ ಆಡಳಿತದ ಅವಧಿಯ ಅಂದರೆ ಸು.ಸಾ.ಶ. 850ರ ಸಂದರ್ಭದ್ದಾಗಿದ್ದು ಇಪ್ಪತ್ತು ಸಾಲುಗಳನ್ನು ಒಳಗೊಂಡಿದೆ.

“ಈ ಶಾಸನದಲ್ಲಿ ಬಲ್ಲಾಳೇಶ್ವರಪುರದ ಉಲ್ಲೇಖ ಬರುತ್ತದೆ. ಈ ಬಲ್ಲಾಳೇಶ್ವರಪುರ ಯಾವುದು ಎಂಬುದನ್ನು ಪತ್ತೆ ಹಚ್ಚಬೇಕಾಗಿದೆ. ಪಲ್ಲವಾನ್ವಯ ಎಂಬ ವಿಷಯದ ಪ್ರಸ್ತಾಪವಿದ್ದು ತುಮಕೂರು ಜಿಲ್ಲೆಯ ಸಂಬAಧವನ್ನು ತೋರಿಸುತ್ತದೆ. ತುಮಕೂರು ಜಿಲ್ಲೆಯ ಅಂಚಿನಲ್ಲಿರುವ ಹೆಂಜೆರು ಅಥವಾ ಹೇಮಾವತಿ ನೊಳಂಬರ ರಾಜಧಾನಿ. ಈ ನೊಳಂಬರಿಗೆ ಪಲ್ಲವಾನ್ವಯ ಎಂದು ಕರೆದಿರುವುದು ಈ ಶಾಸನದಲ್ಲಿ ಕಂಡುಬರುತ್ತದೆ” ಎಂದು ಪ್ರೊ. ಎಂ.ಕೊಟ್ರೇಶ್ ತಿಳಿಸಿದ್ದಾರೆ.

ಅಮೋಘವರ್ಷನ ಆಡಳಿತದ ಅವಧಿಯಲ್ಲಿ ರಾಯಚೂರನ್ನು ಎಡದೊರೆ ನಾಡು, ಎರೆನಾಡು ಸಿರೇಯ ನಾಡೆಂದು ಕರೆಯಲಾಗಿದೆ. ಶಾಸನದಲ್ಲಿ ಮುಳುಗುಂದ ನಾಡಿನ ಉಲ್ಲೇಖವಿದ್ದು, ಯಾವುದೀ ಮುಳುಗುಂದ ಎನ್ನುವುದು ಕುತೂಹಲವಾಗಿ ಉಳಿದಿದೆ. ಶಾಸನದ ಕುರಿತು ಮತ್ತಷ್ಟು ಸಂಶೋಧನೆ ನಡೆಯಬೇಕಿದ್ದು, ಇನ್ನು ಅನೇಕ ಕುತೂಹಲ ಸಂಗತಿಗಳು ಬೆಳಕಿಗೆ ಬರಲಿವೆ ಎಂದು ಪ್ರೊ.ಎಂ.ಕೊಟ್ರೇಶ್ ಮಾಹಿತಿ ಹಂಚಿಕೊಂಡಿದ್ದಾರೆ.

ಸಂಶೋಧನ ಕಾರ್ಯದಲ್ಲಿ ವಿದ್ಯಾರ್ಥಿ ಶಶಿಕುಮಾರ ನಾಯಕ್ ಹಾಗೂ ತುಮಕೂರು ವಿವಿ ರಾಜ್ಯಶಾಸ್ತç ವಿಭಾಗದ ಸಹ ಪ್ರಾಧ್ಯಾಪಕ ಡಾ.ಶ್ರೀಪಾದ ಕುಲಕರ್ಣಿ ಸಹಕರಿಸಿದ್ದಾರೆ ಎಂದು ತಿಳಿಸಲಾಗಿದೆ.
(ಪ್ರೊ.ಎಂ.ಕೊಟ್ರೇಶ್‌ಅವರ ಸಂಪರ್ಕ: 7892757549)

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular